ನವೆಂಬರ್ 11ರಿಂದ 14 ವರೆಗೆ ಯು.ಎ.ಎಸ್.ಬಿ ಕೃಷಿ ಮೇಳ – 2021 ಆಯೋಜನೆ

varthajala
0

ಕೃಷಿ ವಿಶ್ವವಿದ್ಯಾನಿಲಯದ ನೂತನ ತಂತ್ರಜ್ಞಾನಗಳು ಮತ್ತು ಕೃಷಿಯಲ್ಲಿ ನೂತನ ಅವಿಷ್ಕಾರಗಳು ರೈತರಿಗೆ ಸಕಾಲದಲ್ಲಿ ತಲುಪುವಂತಾಗಲು ಈ ವರ್ಷದ ಕೃಷಿ ಮೇಳವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಕೃಷಿ ಮೇಳವನ್ನು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ 2021ರ ನವೆಂಬರ್, 11, 12, 13 ಮತ್ತು 14 ರಂದು ನಾಲ್ಕು ದಿನಗಳ ಕಾಲ ಆಯೋಜಿಸಲು ನಿಧರಿಸಲಾಗಿದೆ. ಎಂದು ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ತಿಳಿಸಿದರು.

ಕೃಷಿ ಮೇಳ ಕುರಿತಂತೆ ಅಂಗೈಯಲ್ಲೇ ಕೃಷಿ ಮೇಳ, ವೆಬ್ ಪೇಜ್, ವೆಬ್‍ಸೈಟ್, ಯೂಟ್ಯೂಬ್, ಟ್ವಿಟ್ಟರ್, ಫೇಸ್‍ಬುಕ್, ಇನ್ಸ್ಟಾಗ್ರಾಮ್ ಮತ್ತು ಜೂಮ್ ಸಭೆ ಮೂಲಕ ನೇರ ಪ್ರಸಾರ ಮಾಡುವುದು ರೈತರಿಗೆ ಕೃಷಿ ಸಮಸ್ಯೆಗಳ ಬಗ್ಗೆ ಕುಳಿತಲ್ಲಿಯೇ ಪರಿಹಾರವನ್ನು ನೀಡಲಾಗುವುದು.
ಇಂದು ಕೃಷಿ ವಿಶ್ವವಿದ್ಯಾನಿಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿ.ಕೆ.ವಿ.ಕೆ) ಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕುಲಪತಿಗಳು ರೈತರ ಆದಾಯವನ್ನು  ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹೊಸ ತಾಂತ್ರಿಕತೆಗಳನ್ನು ಬಳಸಿಕೊಳ್ಳುವುದರ ಬಗ್ಗೆ ರೈತರಿಗೆ ಈ ಕೃಷಿಮೇಳದಲ್ಲಿ ಮಾಹಿತಿ ಒದಗಿಸಲಾಗುವುದು. ಭತ್ತ, ರಾಗಿ, ಬರಗು, ನವಣೆ, ಕಬ್ಬು, ಹಲಸು, ಮೇವಿನ ತೋಕೆ ಗೋದಿ ಸಾಮೆ ಮುಂತಾದ ಹೊಸ ತಳಿಗಳನ್ನು ಪರಿಚಯಿಸಲಾಗುವುದು. ಈ ಕೃಷಿ ಮೇಳದಲ್ಲಿ ಹತ್ತು ಹೊಸ ತಳಿಗಳು ಮತ್ತು 28 ತಂತ್ರಜ್ಞಾನಗಳನ್ನು ಬಿಡುಗಡೆ ಮಾಡಲಾಗುವುದು. ಕೃಷಿ ಸಾಧಕರಿಗೆ ಪುರಸ್ಕಾರ, ಎಂದು ತಿಳಿಸಿದರು. 
ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು, ನೂತನವಾಗಿ ಬಿಡುಗಡೆಯಾದ ವಿವಿಧ  ಬೆಳೆ ತಳಿಗಳ ಪ್ರಾತ್ಯಕ್ಷಿಕೆ,  ತೋಟಗಾರಿಕೆ ಬೆಳೆಗಳ ಮತ್ತು  ನಿಖರ ಕೃಷಿ ಪ್ರಾತ್ಯಕ್ಷಿಕೆ, ಸÀಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವ, ಔಷಧೀಯ ಮತ್ತು ಸುಗಂಧದ್ರವ್ಯ  ಸಸ್ಯಗಳು, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿಗಳು, ಸಮಗ್ರ ಪೋಷಕಾಂಶಗಳು ಹಾಗೂ ಪೀಡೆ ನಿರ್ವಹಣೆ, ಮಣ್ಣು ಪರೀಕ್ಕೆಗನುಗುಣವಾಗಿ ಬೆಳೆ ಸ್ವಂದನೆ ಪ್ರಾತ್ಯಕ್ಷಿಕೆ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ, ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಮಳೆ ಹಾಗೂ ಮೇಲ್ಛಾವಣಿ  ನೀರಿನ ಕೋಯ್ಲು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ, ಪಸುಸಂಗೋಪನೆ, ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ, ಮಾರುಕಟ್ಟೆ ನೈಪುಣ್ಯತೆ ಮಾಹಿತಿ, ಹವಾಮಾನ ಚತುರ ಕೃಷಿ, ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ ಕುರಿತಾದ ಕೃಷಿ ತಂತ್ರಜ್ಞನಗಳ ಬಗ್ಗೆ ಪ್ರಾತ್ಯಕ್ಷಿಯನ್ನು ನೀಡಲಾಗುವುದು. ಇದರಿಂದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.

ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವಂತಹ ರೈತರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಅದರಂತೆ ರಾಜ್ಯಮಟ್ಟದ ಪ್ರಶಸ್ತಿಗಳಾದ ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆಯ ಎಂ.ಸಿ. ರಂಗಸ್ವಾಮಿ, ಡಾ|| ಎಂ.ಹೆಚ್.ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ  ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡೊಡ್ಡಬಳ್ಳಾಪುರ ತಾಲ್ಲೂಕು ದೊಡ್ಡ ತುಮಕೂರಿನ ಟಿ.ಎಂ. ಅರವಿಂದ, ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿಗೆ ಹಾಸನ ಜಿಲ್ಲೆ ಆಲೂರು ತಾಲ್ಲೂಕು ಯಡೂರಿನ ಕುಮಾರಿ ವೈ.ಜಿ. ಮಂಜುಳ, ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡೊಡ್ಡಬಳ್ಳಾಪುರ ತಾಲ್ಲೂಕು ಲಕ್ಷ್ಮೀದೇವಿಪುರದ ಸಿ. ನವಿಕ್ರಮ್, ಡಾ|| ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿಗೆ ಕೋಲಾರ ತಾಲ್ಲೂಕಿನ ಅರಿನಾಗನಹಳ್ಳಿಯ ಮುನಿರೆಡ್ಡಿ, ಡಾ|| ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡೊಡ್ಡಬಳ್ಳಾಪುರದ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಎ.ಪಿ. ಮಲ್ಲಿಕಾರ್ಜುನಗೌಡ, ಡಾ: ಎಂ.ಹೆಚ್. ಮರೀಗೌಡ ಅತ್ಯುತ್ತಮ ತೋಟಗಾರಿಕಾ ಸಂಶೋಧನಾ ರಾಷ್ಟ್ರೀಯ ದತ್ತಿ ಪ್ರಶಸ್ತಿ ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾನಿಲಯದ ಸಂಶೋಧನಾ ನಿರ್ದೇಶಕರಾದ ಡಾ. ಹೆಚ್.ಪಿ.ಮಹೇಶ್ವರಪ್ಪ ಅವರು ಅರ್ಹರಾಗಿದ್ದು, ಈ ಕೃಷಿ ಮೇಳದಲ್ಲಿ ಇವರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. 

ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿ; ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ 10 ಜಿಲ್ಲೆಗಳಲ್ಲಿ ಪ್ರಗತಿಪರ ರೈತ ಪ್ರಶಸ್ತಿ ಮತ್ತು ಪ್ರಗತಿಪರ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿ ಪರ ರೈತ ಮತ್ತು ರೈತ ಮಹಿಳೆಯರಿಗೆ ನೀಡಲಾಗುವುದು.
ತಾಲ್ಲೂಕು ಮಟ್ಟದ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಯುವ ರೈತ ಮಹಿಳಾ ಪ್ರಶಸ್ತಿ; ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವ್ಯಾಪ್ತಿಗೆ ಒಳಪಡುವ 61 ತಾಲ್ಲೂಕುಗಳಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಮತ್ತು ಪ್ರಗತಿಪರ ಯುವ ರೈತ ಮಹಿಳಾ ಪ್ರಶಸ್ತಿಗಳನ್ನು ಅರ್ಹ ಪ್ರಗತಿಪರ ಯುವ ರೈತ ಮತ್ತು ಪ್ರಗತಿಪರ ಯುವ ರೈತ ಮಹಿಳೆಯರಿಗೆ  ನೀಡಲಾಗುವುದು. ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಎಂದು ತಿಳಿಸಿದರು. 

ಅಲ್ಲದೆ ಕೃಷಿ ಮೇಳದಲ್ಲಿ, ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಮಳಿಗೆಗಳ, ಕೃಷಿ ಸಂಬಂಧಿ ವಿಶ್ವವಿದ್ಯಾನಿಲಯಗಳು / ಸಂಸ್ಥೆಗಳು, ಅಭಿವೃದ್ಧಿ ಇಲಾಖೆಗಳ ಮಳಿಗೆಗಳು, ಕೃಷಿ ಪರಿಕರಗಳ ಮಳಿಗೆಗಳು, ಕೃಷಿ ಇಂಜಿನಿಯರಿಂಗ್ ಮತ್ತು ಪಶುಸಂಗೋಪನೆ ಮತ್ತು ಕೃಷಿ ವಿಶ್ವವಿದ್ಯಾನಿಲಯದ ನೂತನ ತಂತ್ರಜ್ಞಾನಗಳನ್ನು ಕುರಿತಾದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುವುದು.

ಮಾಧ್ಯಮ ಗೋಷ್ಠಿಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ. ಎನ್. ದೇವಕುಮಾರ್, ಸಂಶೋಧನ ನಿರ್ದೇಶಕರಾದ ಡಾ. ವೈ.ಜಿ. ಷಡಾಕ್ಷರಿ ಹಾಗೂ ಕೃಷಿ ವಿಶ್ವವಿದ್ಯಾನಿಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Post a Comment

0Comments

Post a Comment (0)