ಆತ್ಮಜೋತಿ ಬೆಳಗಲಿ

varthajala
0

ದೀಪಾವಳಿ ವಿಶ್ವದಾದ್ಯಂತ ಅತಿ ದೊಡ್ಡ ಹಬ್ಬವಾಗಿದ್ದು, ಹಿಂದೂ, ಜೈನ ,ಬುದ್ಧ ಮತ್ತು ಸಿಖ್ ಧರ್ಮಗಳಲ್ಲಿ ಈ ಹಬ್ಬಕ್ಕೆ ಮಹತ್ವ ಇದೆ. ಭಾರತ, ನೇಪಾಳ, ಶ್ರೀಲಂಕಾ, ಮಿಯಮ್ಮಾರ, ಮಾರಿಶಿಯಸ್, ಗಯಾನಾ, ಟ್ರಿನಿಡಾಡ್, ಸೂರಿನಾಮ್, ಮಲೇಶಿಯ, ಸಿಂಗಾಪುರ ಮತ್ತು ಫಿಜಿ ದೇಶಗಳಲ್ಲಿ ರಾಷ್ಡಿçÃಯ ರಜೆಯು ಕಲ್ಪಿಸಲಾಗಿದ್ದು ಜನರು ದೀಪಾವಳಿಯು ಸಡಗರ ಸಂಭ್ರಮದಿAದ ಆಚರಿಸುತ್ತಾರೆ. ನೇಪಾಳದಲ್ಲಿ ಹೋಸ ವರ್ಷ ದೀಪಾವಳಿಗೆ ಶುರುವಾಗುತ್ತದೆ.

ಜೈನ ಧರ್ಮದಲ್ಲಿ ದೀಪಾವಳಿಯು ದೇವದಿವಾಳಿ ಎಂದು ಹೆಳುತ್ತಾರೆ. ಈ ದಿನ ಕೋನೆಯ ತಿರ್ಥಂಕಾರನಾದ ಮಹಾವಿರ ಬಿಹಾರ ರಾಜ್ಯದ ಪಾವಪುರಿ ಎಂಬ ಸ್ಥಳದಲ್ಲಿ (15 ಆಕ್ಟೊಬರ  ಕ್ರಿ.ಪು.527) ನಿರ್ವಾಣ ಅವಸ್ಥೆಗೆ ಹೊದನು. ಕ್ರಿ.ಪೂ. 3ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವAತೆ ಮಾಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಞಾನಜ್ಯೋತಿಯ ಸಂಕೇತವಾಗಿ 16 ಗಣ-ಚಕ್ರವರ್ತಿ, 9 ಮಲ್ಲ ಮತ್ತು 9 ಲಿಚ್ಚಾವಿ ಅವರು ತಮ್ಮ ಗಣರಾಜ್ಯದಲ್ಲಿ  ದೀಪ ಬೆಳಗಿಸಿ ದ್ವಾರವನ್ನು ಬೆಳಗಿದರು. ಜೈನರಿಗೆೆ ಇದು ವರ್ಷದ ಪ್ರಾರಂಭದ ದಿನ. ಆದರೆ ಆಚಾರ್ಯ ಬೆನಸೆನ್ ಬರೇದಿರುವ ಹರಿವಂಶ ಪುರಾಣದಲ್ಲಿ ದೀಪಾಲಿಕಯಾ (ದೀಪಾವಳಿ) ಬಗ್ಗೆ ಉಲ್ಲೆಖವಿದೆ. ದೀಪಾಲಿಕಯಾ ಎಂದರೆ ಪ್ರಕಾಶವು ದೇಹವನ್ನು ತ್ಯಜಿಸುವುದು.

ಸಿಕ್ಖ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. 1620 ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ ಗ್ವಾಲಿರ‍್ನ ಕೋಟೆಯಲ್ಲಿ ಬಂಧಿತರಾಗಿದ್ದ 52 ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.

`ಅವಳಿ' ಎಂದರೆ ಮಾಲೆ, ಸಾಲು ಎಂದರ್ಥ. ದೀಪಾವಳಿ ದೀಪಗಳ ಸಾಲಿನಂತೆ ಹಬ್ಬಗಳ ಸಾಲೂ ಹೌದು. ನೀರು ತುಂಬುವ ಹಬ್ಬದಿಂದ ಆರಂಭವಾಗಿ ನರಕಚತುರ್ದಶಿ, ಧನತೇರಸ, ಬಲಿಪಾಡ್ಯಮಿ, ಭಾವನಬಿದಿಗೆ, ಅಕ್ಕನ ತದಿಗೆ, ಪಂಚಮಿಯ ವರೆಗೆಪ್ರತಿದಿನವೂ ಹಬ್ಬ.  

ದೀಪಾವಳಿ ಬೆಳಕಿನ ಹಬ್ಬವಾಗಿದ್ದು ದೀಪಗಳಿಗೆ ಈ ಹಬ್ಬದಲ್ಲಿ ವಿಶೆಷ ಮಹತ್ವ ಇದೆ. ದೀಪದಾನವು ಈ ಹಬ್ಬದಲ್ಲಿ ಮಾಡುವ ವಾಡಿಕೆ ಇದೆ. ಸ್ಥೂಲ ದೀಪದ ಜೊತೆಗೆ ಆತ್ಮಜೋತಿಯನ್ನು ಬೆಳಗಿಸಿದರೆ ನಮ್ಮ ಜೀವನ ಪರಿಪೂರ್ಣ ವಾಗುತ್ತದೆ.   ಪ್ರತಿ ಒಂದು ಹಬ್ಬಕ್ಕೆ ತನ್ನದೇ ಆದ ಹಿನ್ನಲೆ ಇದ್ದು, ಅಧ್ಯಾತ್ಮಿಕ ರಹಸ್ಯವನ್ನು  ತಿಳಿಸಿಕೊಡುವುದರ ಜೊತೆಗೆ ಅದನ್ನು ತಮ್ಮ ನಿತ್ಯ ಜೀವನದಲ್ಲಿ ಸಹಜವಾಗಿ ಹೇಗೆ ಅಳವಡಿಕೊಳ್ಳುಬೇಕು ಎನ್ನುವುದನ್ನು ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಹೇಳಲಾಗುತ್ತದೆ. ಅe್ಞÁನದ ಕತ್ತಲೆಯಿಂದ  ಸತ್ಯ e್ಞÁನದ ಬೆಳಕವನ್ನು ನಾವು ಪಡೆದರೆ ನಮ್ಮ ಈ ಮಾನವ ಜನ್ಮ ಸಾರ್ಥಕ.

ದೀಪಾವಳಿಯ `ಬಲಿ' ರಾಜಾ ಮತ್ತು ನರಕಾಸುರನ  ಎರಡು ಕಥೆಗಳು ಲಾಕ್ಷಣಿಕ ಭಾಷೆಯ ರೂಪದಲ್ಲಿ ವರ್ಣನೆ ಮಾಡಲಾಗಿದೆ.  ಈಶ್ವರೀಯ e್ಞÁನದ ದೃಷ್ಟಿಯಲ್ಲಿ ನೊಡಿದಾಗ `ನರಕಾಸುರ' ಮಾಯೆ ಅಥವಾ ಮನೋವಿಕಾರಗಳ ರೂಪವಾಗಿದೆ.  ಕಾಮ, ಕ್ರೋಧ, ಲೋಭ, ಮೋಹ, ಹಾಗೂ ಅಹಂಕಾರಗಳು ಆಸುರಿ ಲಕ್ಷಣಗಳು ಮತ್ತು ನರಕದ ದ್ವಾರ ಆಗಿವೆ.  ಈ ವಿಕಾರಗಳನ್ನು ಜಯಿಸುವುದು ಎಂದರೆ `ಬಲಿ' ಕೊಡುವುದು ಎಂದು ಹೇಳಲಾಗುತ್ತದೆ.  ವಿಶ್ವದ ಇತಿಹಾಸದಲ್ಲಿ ನಾಲ್ಕು ಯುಗಗಳು ಇವೆ. ಸತ್ಯಯುಗ, ತ್ರೆತಾಯುಗ, ದ್ವಾಪರಯುಗ, ಮತ್ತು ಕಲಿಯುಗ. ಈ ಕಲಿಯುಗದ ಅಂತಿಮ ಸಮಯವು ಪಂಚವಿಕಾರ ಮತ್ತು ಆಸುರಿಗುಣಗಳ ಸಾಮ್ರಾಜ್ಯದ ಸಮಯವಾಗಿದೆ. ಪ್ರತಿಯೊಬ್ಬ ನರ-ನಾರಿಯರ ಮನಸ್ಸಿನ ಮೇಲೆ ವಿಕಾರಗಳ ರಾಜ್ಯ ಇದೆ.  ಇದಕ್ಕೆ `ನರಕಾಸುರ" ಅಥವಾ `ರಾಜಾಬಲಿಯ" ಅಧಿಪತ್ಯ ಎಂದು ಹೇಳಲಾಗುತ್ತದೆ.  ಭಾರತವು ಸತ್ಯಯುಗದಲ್ಲಿ ಸ್ವರ್ಗವಾಗಿತ್ತು ಅಲ್ಲಿನ ಮನುಷ್ಯರೆಲ್ಲರು ದೇವಿ-ದೇವತೆಗಳಾಗಿದ್ದರು. ಅವರೇ ಜನ್ಮ ಮರಣದ ಚಕ್ರದಲ್ಲಿ ಬರುತ್ತಾ ಈಗ ನರಕದಲ್ಲಿ `ನರಕಾಸುರ' ಅಥವಾ `ಬಲಿ'ಯ ಅಧೀನರಾಗಿದ್ದಾರೆ. ಆತ್ಮe್ಞÁನ ಮತ್ತು ನಿರಾಕಾರ ಶಿವನ ಧ್ಯಾನದಿಂದ ನಾವು ಪುನಃ ಬಂಧನಮುಕ್ತರಾಗಲು ಸಾಧ್ಯವಿದೆ.  

ಆತ್ಮe್ಞÁನ ಎಂದರೆ ಆತ್ಮದೀಪವನ್ನು ಬೆಳಗಿಸುವುದು. `ನಾನು ಒಂದು ಜ್ಯೋತಿ, ಜಾತಿಇಲ್ಲದ ಅತಿಸೂಕ್ಷö್ಮ ಆತ್ಮಜ್ಯೋತಿ. ಶರೀರದ ಹಣೆಯ ಮಧ್ಯದಲ್ಲಿ ಹೊಳೆಯುವ ಚ್ಯೆತನ್ಯ ಜ್ಯೋತಿ, ದೇಹ ಎಂಬ ರಥದ ಸಾರಥಿ ನಾನು ಆತ್ಮ. ದೇಹದ ಮೂಲಕ ಈ ಸೃಷ್ಟಿ ನಾಟಕದಲ್ಲಿ ಪಾತ್ರ ಅಭಿನಯಿಸುವ ಪಾತ್ರಧಾರಿ ನಾನು. ಈ ರೀತಿ ನಿತ್ಯಚಿಂತನೆ ಮಾಡಬೇಕು. ಇದನ್ನೇ ಆತ್ಮಾನುಭೂತಿ ಎಂದು ಕರೆಯಲಾಗುತ್ತದೆ. ಆತ್ಮಜ್ಯೋತಿಯನ್ನು ಬೆಳಗಿಸಲು e್ಞÁನಘೃತ ಬೇಕು. ಎರಡನೆದಾಗಿ, ಸರ್ವ ಆತ್ಮರ ತಂದೆಯಾದ ಪರಮಜ್ಯೋತಿಯ ಪರಿಚಯ ಅತಿ ಅವಶ್ಯಕ. ಪರಮಾತ್ಮನು ನಿರಾಕಾರ, ಅಯೋನಿಜ, ಅಭೊಕ್ತ, ಅಜನ್ಮ, ಅವ್ಯಕ್ತ ಅಶರೀರಿ, ಅವಿಭಾಜ್ಯ, ಅಮರ, ಅವಿನಾಶಿ, ಸರ್ವಶ್ರೇಷ್ಠನಾದ, ಶಿವನು, ಅವನೇ ಅಲ್ಲಾ, ಅವನೆ ಈಶ್ವರ, ಅವನೇ ಗಾಡ್, ಓಂಕಾರನು, ದೇವನೊಬ್ಬ, ನಾಮ ಹಲವು,  ಭಾವ ಒಂದೇ, ಭಾಷೆ  ಹಲವು, ನಮ್ಮಲ್ಲೇಕೆ ಭೇದವೂ. ನಾನು ಹಿಂದು, ನಾನು ಮುಸಲ್ಮಾನ, ಕ್ರೆöÊಸ್ತರೆಂಬ ಭೇದವೂ. ನಾಳೆ ನಾಡನಾಳುವಂತಾ ಮಕ್ಕಳಲ್ಲಿ ಜಗಳವೂ. ಬ್ರಹ್ಮ, ವಿಷ್ಣು, ಬಸವ, ಏಸು, ನಾನಕ ಪೈಗಂಬರೆಲ್ಲ ಒಬ್ಬದೇವನ ಮಕ್ಕಳು. ಸರ್ವಧರ್ಮವನ್ನು ಬಿಟ್ಟು, ದೇಹ ಧರ್ಮವನ್ನು ಸುಟ್ಟು, ನಿರಾಕಾರ ಜೋತಿರ್ಬಿಂದು ತಂದೆ ಶಿವನ ನೆನೆಸಿದಾಗ ಮುಕ್ತಿ ಮತ್ತು ಜೀವನಮುಕ್ತಿಯು ಪ್ರಾಪ್ತವಾಗುವುದು. ಹೀಗೆ ನಾನು ಆತ್ಮಜ್ಯೋತಿಯಾಗಿ ಪರಮಜ್ಯೋತಿಯನ್ನು ನೆನಪು ಮಾಡುವುದಕ್ಕೆ ಸಹಜ ರಾಜಯೋಗವೆಂದು ಹೇಳುತ್ತಾರೆ.

ದೀಪಾವಳಿಯ ದಿನ ಪ್ರತಿಯೊಬ್ಬರು ತಮ್ಮ ಮನೆಗಳನ್ನು, ಸುಣ್ಣ ಬಣ್ಣಗಳಿಂದ ಶುಚಿಗೊಳಿಸಿ, ದೀಪಾಲಂಕಾರವನ್ನು ಮಾಡುತ್ತಾರೆ.  ಅದರ ಜೊತೆಗೆ ಮನಸ್ಸಿನಲ್ಲಿ ಇರುವ ಅಮವಾಸ್ಯೆಯ ಪ್ರತೀಕವಾದ ಅe್ಞÁನ ಅಂಧಕಾರವನ್ನು ದೂರ ಮಾಡಲು ಅಂತರ ಮನದಲ್ಲಿ e್ಞÁನದ ಜ್ಯೋತಿಯನ್ನು ಬೆಳಗಿಸಬೇಕಾಗಿದೆ. ನಿರಾಕಾರನಾಗಿರುವ ಶಿವನ ಸಂಬAಧದಿAದ ಅಂದರೆ ರಾಜಯೋಗದಿಂದ ಅನೇಕ ಶಕ್ತಿಗಳ, ಸರ್ವಗುಣಗಳ ಪ್ರಾಪ್ತಿ ಆಗುತ್ತದೆ. ಆದ್ದರಿಂದಲೇ ಭಕ್ತರು ಭಗವಂತನ ಮುಂದೆ  `ಅಸತೋಮಾ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ' ಎಂದು ಹಾಡುತ್ತಾರೆ.  ದೀಪ ದಾನದ ಅರ್ಥವು e್ಞÁನದಾನವೇ ಆಗಿದೆ. ದೀಪಾವಳಿಯ ದಿನದಂದು ಹೊಸ ಬಟ್ಟೆಗಳನ್ನು ಧರಿಸುತ್ತಾರೆ, ಸಿಹಿಯನ್ನು ಹಂಚುತ್ತಾರೆ, ಹಳೆ ಖಾತೆಯನ್ನು ಸಮಾಪ್ತ ಮಾಡಿ ಹೊಸ ಖಾತೆಯನ್ನು ಶುರು ಮಾಡುತ್ತಾರೆ. ಇದರ ಜೊತೆ ಜೊತೆಗೆ ಹೊಸ ಭಾವ, ಮಧುರ ನುಡಿ, ಸ್ನೇಹ, ಪ್ರೀತಿಯ ಅವಶ್ಯಕತೆ ಇದೆ. ಹಳೆ ಕರ್ಮದ ಖಾತೆಯನ್ನು ರಾಜಯೋಗದ ತಪಸ್ಸಿನ ಬಲದಿಂದ ಸಮಾಪ್ತಿ ಮಾಡಬೇಕಾಗಿದೆ. ನಿರಾಕಾರ ಪರಮಜ್ಯೋತಿ ಪರಮಾತ್ಮನು ಪುನಃ ಪವಿತ್ರತೆ, ಸುಖ ಶಾಂತಿ ಸಮೃದ್ಧಿಯ `ರಾಮರಾಜ್ಯ' ಸ್ಥಾಪನೆ ಮಾಡುತ್ತಿರುವ ಸಂಕೇತವು ದೀಪಾವಳಿ.

ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ:

ಶತ್ರು ಬುದ್ಧಿ ವಿನಾಶಾಯ ದೀಪಜ್ಯೋತಿರ್ನಮೋಸ್ತುತೆ

ದೀಪ ಜ್ಯೋತಿ: ಪರಬ್ರಹ್ಮ ದೀಪ ಜ್ಯೋತಿರ್ಜನರ್ಧನ:

ದೀಪೋ ಹರತಿ ಪಾಪಾನಿ ಸಂಧ್ಯಾದೀಪ ನಮೋಸ್ತುತೆ

ಹಾಗಾದರೆ ಬನ್ನಿ ನಾವು ಈ ವರ್ಷದ ದೀಪಾವಳಿಯನ್ನು ಆತ್ಮದೀಪವನ್ನು ಬೆಳಗಿಸಿ, ಪರಮಜ್ಯೋತಿ ಪರಮಾತ್ಮನ ಜೊತೆಗೆ ಸಂಬAಧವನ್ನು ಜೊಡಿಸಿ,ಈಶ್ವರಾನುಭೂತಿಯನ್ನು ಮಾಡುತ್ತಾ ಅನ್ಯರಿಗೂ ಜ್ಷಾನದೀಪವನ್ನು ದಾನ ಮಾಡಿ ಆಚರಿಸೋಣ. ಇರ್ಷೆಯನ್ನು ಬಿಟ್ಟು ಆಶೆಯ ದೀಪಗಳನ್ನು ಬೇಳಗಿಸೋಣ.            

-ವಿಶ್ವಾಸ. ಸೋಹೋನಿ.

ಬ್ರಹ್ಮಾಕುಮಾರಿಸ್, ಮೀಡಿಯಾ ವಿಂಗ್, 9483937106



Tags

Post a Comment

0Comments

Post a Comment (0)