ಭಾರತದ ಶಕ್ತಿಯನ್ನು ಅನಾವರಣಗೊಳಿಸಿದ ಸ್ವಾಮಿ ವಿವೇಕಾನಂದರು- ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಅಭಿಪ್ರಾಯ

varthajala
0

ಬೆಂಗಳೂರು: ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕøತಿಕ ಶ್ರೀಮಂತಿಕೆಯನ್ನು ಸ್ವಾಮಿ ವಿವೇಕಾನಂದರು ಜಗತ್ತಿಗೇ ತೋರಿಸಿಕೊಟ್ಟವರು ಎಂದು ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು ಅವರು ಅಭಿಪ್ರಾಯ ಪಟ್ಟರು. 





ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಅಮೆರಿಕ, ರμÁ್ಯ ಮತ್ತಿತರ ಶ್ರೀಮಂತ ದೇಶಗಳು ಸೇರಿದಂತೆ ಎಲ್ಲಾ ರಾಷ್ಟ್ರಗಳು ನಮ್ಮ ಸಂಸ್ಕøತಿ ಮತ್ತು ಆಧ್ಯಾತ್ಮಿಕ ಹಿನ್ನೆಲೆಯಲ್ಲಿ ಭಾರತಕ್ಕೆ ವಿಶೇಷ ಗೌರವ ನೀಡುತ್ತವೆ ಎಂದು ತಿಳಿಸಿದರು. 

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಕುರಿತು ಅಪಾರ ವಿಶ್ವಾಸವನ್ನು ಹೊಂದಿದ್ದರು ಎಂದ ಅವರು, ಜಾಗತಿಕ ಮಟ್ಟದಲ್ಲಿ ಭಾರತವನ್ನು ವಿಶ್ವಗುರುವಾಗಿ ಮಾಡಲು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. 

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರರಾದ ಎಮ್.ಜಿ. ಮಹೇಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ಚಲನಚಿತ್ರ ನಟಿ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶ್ರುತಿ, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  

                                                                           

Post a Comment

0Comments

Post a Comment (0)