ವಿವಾದಿತ ಶಿಕ್ಷಕಿ ವಿರುದ್ಧ ದೂರು ದಾಖಲಿಸಿದ ಪೋಷಕರು

varthajala
0

ಬೆಂಗಳೂರು, ಫೆ 12: ಬೆಂಗಳೂರಿನ ವಿದ್ಯಾಸಾಗರ ಶಾಲೆಯಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಪೋಷಕರು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಂದ್ರ ಲೇಔಟ್ ಪೊಲೀಸ್ ಠಾಣೆ ಬಳಿ ಸೇರಿರುವ ಪೋಷಕರು ಶಿಕ್ಷಕಿ ವಿರುದ್ಧ ದೂರು ನೀಡಿದ್ದು, ಚಂದ್ರಾ ಲೇಔಟ್ ಪೊಲೀಸರು ದೂರು ಸ್ವೀಕರಿಸಿದ್ದಾರೆ. ಈ ಮಧ್ಯೆ, ಹಿಜಾಬ್ ಫೈಟ್​ ಸಮ್ಮುಖದಲ್ಲಿ ಶಿಕ್ಷಣ ಇಲಾಖೆ ಆತಂಕದಲ್ಲಿದೆ. ಸೋಮವಾರದಿಂದ ಪ್ರೌಢ ಶಾಲೆ ಆರಂಭಕ್ಕೆ ಮುಂದಾಗಿತ್ತು. ಆದರೆ ಈಗ ಸೋಮವಾರದಿಂದ ಶಾಲೆ ಆರಂಭಕ್ಕೆ ಇಲಾಖೆಯು ಆತಂಕ ಪಡುತ್ತಿದೆ.



Post a Comment

0Comments

Post a Comment (0)