ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಸಕಲ ಸಿದ್ಧತೆ - ಸಚಿವ ಡಾ.ನಾರಾಯಣಗೌಡ

varthajala
0

ಬೆಂಗಳೂರು, ಮಾರ್ಚ್ 30 (ಕರ್ನಾಟಕ ವಾರ್ತೆ) : ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ಕೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಏಪ್ರಿಲ್ 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ  ಬಿಡುಗಡೆಗೊಳಿಸಲಾಗುವುದು ಎಂದು ರೇμÉ್ಮ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ವಿಧಾನಸೌಧದಲ್ಲಿ ಇಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ   ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಏಪ್ರಿಲ್ 24 ರಿಂದ ಮೇ 03ರ ವರೆಗೆ ನಡೆಯಲಿದ್ದು, ಏಪ್ರಿಲ್ 1 ರಂದು ಕ್ರೀಡಾಕೂಟದ ಲೋಗೋ, ಥೀಮ್ ಸಾಂಗ್,  ಜೆರ್ಸಿ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುವುದು.
     ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,  ಕೇಂದ್ರ ಯುವಜನ ಮತ್ತು ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಸಚಿವ ಶ್ರೀ ಅನುರಾಗ್ ಠಾಕೂರ್, ಕೇಂದ್ರ ಗೃಹ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಸಿತ್ ಪ್ರಾಮಾಣಿಕ್, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಏಪ್ರಿಲ್ 24 ರಂದು ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟನೆಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಲಿದ್ದಾರೆ. ಅಲ್ಲದೇ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಜುಡೋ, ವಾಲಿಬಾಲ್, ಕಬ್ಬಡಿ, ಬಾಸ್ಕೆಟ್ ಬಾಲ್ , ಕರಾಟೆ , ಮಲ್ಲಕಂಬ ಸೇರಿದಂತೆ 20 ಕ್ರೀಡೆಗಳು ನಡೆಯಲಿದ್ದು, ದೇಶದ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 8 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು, ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ.  ಜೈನ್ ವಿವಿ ಕ್ಯಾಂಪಸ್, ಕಂಠೀರವ ಕ್ರೀಡಾಂಗಣದಲ್ಲಿ ಗೇಮ್ಸ್‍ಗಳು ನಡೆಯಲಿವೆ.
      ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಎರಡನೇ  ಆವೃತಿಯನ್ನು ಆಯೋಜಿಸುವುದು ಕರ್ನಾಟಕಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿರುವುದರಿಂದ ಅದ್ದೂರಿಯಾಗಿ ಆಯೋಜಿಸಲು ಆರು ತಿಂಗಳಿನಿಂದ ಸಿದ್ಧತೆ ನಡೆಸುತ್ತಿದ್ದು, ಕಳೆದ ಎರಡು ತಿಂಗಳಿಂದ ಪ್ರತಿನಿತ್ಯ ವಿಶೇಷ ನಿಗಾವಹಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಾ ಥೀಮ್ ಸಾಂಗ್ ನಾ  ಕನ್ನಡದ ಖ್ಯಾತ ರಾಪರ್, ಗಾಯಕ ಚಂದನ್ ಶೆಟ್ಟಿ ಸಿದ್ಧಪಡಿಸಿದ್ದಾರೆÉ.
ಕ್ರೀಡೆ ಜೊತೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು ಸರಕಾರದ ಉದ್ದೇಶವಾಗಿದ್ದು ಈ ಕಾರಣಕ್ಕಾಗಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಅನ್ನು “ಹಸಿರು ಕ್ರೀಡಾಕೂಟ”    (ಗ್ರೀನ್ ಗೇಮ್ಸ್) ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

     ಈ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರೀತಿಯ ಸಹಕಾರ ನೀಡಿದ್ದು, ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಮಾರ್ಗದರ್ಶನ ನೀಡುತ್ತಿದ್ದಾರೆ. ಅದರ ಜೊತೆಗೆ ನಮ್ಮ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕೂಡ ಪ್ರತಿನಿತ್ಯ ಮಾಹಿತಿ ಪಡೆಯುತ್ತಿದ್ದು, ಎಲ್ಲಾ ರೀತಿಯ ಪೆÇ್ರೀತ್ಸಾಹ ನೀಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.
     ಇದೇ ಸಂಧರ್ಭದಲ್ಲಿ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಧನೆ ಕುರಿತ 'ಕಾರ್ಯಪಥ' ಪುಸ್ತಕವನ್ನು ಅನುರಾಗ್ ಠಾಕೂರ್ ಅವರು ಬಿಡುಗಡೆಗೊಳಿಸಲಿದ್ದಾರೆ ಹಾಗೂ ಕಂಠೀರವ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಹೊಸ ಸಿಂಥೆಟಿಕ್ ಅಥ್ಲೆಟಿಕ್ ಟ್ಯ್ರಾಕ್‍ನ್ನು ಉದ್ಘಾಟನೆ ಮಾಡಲಾಗುವುದು.

ಪತ್ರಿಕಾ ಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜೈನ್ ವಿಶ್ವವಿದ್ಯಾನಿಲಯದ ಕುಲಪತಿ ಉಪಸ್ಥಿತರಿದ್ದರು.

Post a Comment

0Comments

Post a Comment (0)