SSLC EXAMINATIONS : ಎಸ್.ಎಸ್.ಎಲ್.ಸಿ ಪರೀಕ್ಷೆ: ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

varthajala
0

ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕಾರ್ಯವು ಅತ್ಯಂತ ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಮತ್ತು ಕಾನೂನು ಭದ್ರತೆಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ನಡೆದ “2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ ಕುರಿತ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19ರ ಕಾರಣ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಿçÃನಿಂಗ್ ವ್ಯವಸ್ಥೆ ಮಾಡಿರಬೇಕು ಎಂದು ತಿಳಿಸಿದರು. 

ಪ್ರತಿ ವಿಷಯಗಳ ಪರೀಕ್ಷೆಗಳಿಗೂ 2 ರಿಂದ 3 ದಿನಗಳ ಅಂತರವಿದ್ದು, ಪರೀಕ್ಷಾ ವೇಳಾಪಟ್ಟಿಯೂ ವಿದ್ಯಾರ್ಥಿ ಸ್ನೇಹಿಯಾಗಿದೆ ಎಂದರಲ್ಲದೆ, ಪ್ರತಿದಿನ ಬೆಳಿಗ್ಗೆ 10.15 ಗಂಟೆಗೆ ಮೊದಲ ಬೆಲ್ ಆಗಲಿದ್ದು, ವಿದ್ಯಾರ್ಥಿಗಳು 10.45 ಗಂಟೆಯ ಒಳಗೆ ಪರಿಕ್ಷಾ ಕೇಂದ್ರಕ್ಕೆ ಬರಲು ಅವಕಾಶವಿದ್ದು, ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳಾಗಲೀ, ವಿದ್ಯಾರ್ಥಿಗಳಾಗಲೀ ಮೊಬೈಲ್, ಕ್ಯಾಮರ, ಡಿಜಿಟಲ್ ಗಡಿಯಾರವನ್ನು ತರುವಂತಿಲ್ಲ ಎಂದು ಹೇಳಿದರು.

ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳಂತೆ ಕೊಠಡಿ ನಿಗದಿಗೊಳಿಸಲು ಸೂಚಿಸಿದರಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಉತ್ತಮ ಆಸನ ವ್ಯವಸ್ಥೆ, ಶುಭ್ರ ಶೌಚಾಲಯ, ಸಿಸಿ ಕ್ಯಾಮರ, ಗಾಳಿ ಬೆಳಕಿನಿಂದ ಕೂಡಿದ ಕೊಠಡಿಗಳು ಇತ್ಯಾದಿ ಮೂಲಭೂತ ಸೌಲಭ್ಯಗಳು ಇರುವ ಕುರಿತು ಭೇಟಿ ನೀಡಿ, ಖಚಿತಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ 13,872 ವಿದ್ಯಾರ್ಥಿಗಳು ನೊಂದಾಯಿಸಿಕೊAಡಿದ್ದು, ಈ ಪೈಕಿ 534 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 58 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಪೈಕಿ ದೇವನಹಳ್ಳಿಯಲ್ಲಿ 2 ಪರೀಕ್ಷಾ ಕೇಂದ್ರಗಳನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ ಎಂದರು.

ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಮತ್ತು ರೆಗ್ಯುಲರ್ ಮಾರ್ಗ ಇಲ್ಲದ ಕಡೆಗಳಲ್ಲಿ ಮಕ್ಕಳಿಗಾಗಿಯೇ ಪರೀಕ್ಷಾ ವಿಶೇಷ ಬಸ್‌ಗಳನ್ನು ಒದಗಿಸುವಂತೆ ದೊಡ್ಡಬಳ್ಳಾಪುರ ಮತ್ತು ಇತರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಅವರಿಗೆ ಸೂಚಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯನಿರತರೆಲ್ಲರೂ ಕಡ್ಡಾಯವಾಗಿ ಮಂಡಳಿಯಿAದ ನೀಡಿರುವ ಗುರುತಿನ ಚೀಟಿಯನ್ನು ಧರಿಸಬೇಕು ಹಾಗೂ ಅನಧಿಕೃತ ವ್ಯಕ್ತಿಗಳು ಒಳಗೆ ಪ್ರವೇಶಿಸುವುದನ್ನು ನಿರ್ಭಂದಿಸಲಾಗಿದೆ ಎಂದರಲ್ಲದೆ, ಪರೀಕ್ಷೆ ಕುರಿತಂತೆ ಸುಳ್ಳು ಸುದ್ದಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಶಿಕ್ಷಣಾಧಿಕಾರಿ ಹನುಮಂತಪ್ಪ, ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಂಬAಧಿಸಿದ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Post a Comment

0Comments

Post a Comment (0)