ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತ ಪ್ರಯಾಣ ಅವಕಾಶ

varthajala
0

 ದ್ವಿತೀಯ ಪಿ.ಯು.ಸಿ  ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ


ಬೆಂಗಳೂರು, ಏಪ್ರಿಲ್ 16, (ಕರ್ನಾಟಕ ವಾರ್ತೆ) : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 22.04.2022 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು, ಅಂದರೆ ದಿನಾಂಕ 22-04-2022 ರಿಂದ 18-05-2022 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ನಿಗಮದ ಎಲ್ಲಾ ಚಾಲಕ / ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರರೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಆಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು, ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಆಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು - ಬಸ್ಸನ್ನು ಹತ್ತಲು / ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು.

ಚಾಲನಾ ಸಿಬ್ಬಂದಿಗಳು ಈ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಈ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)