ಬಳ್ಳಾರಿಯ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

varthajala
0

 ಬಳ್ಳಾರಿ, ಮೇ 03; ಬಳ್ಳಾರಿಯ ಬಿಎಸ್‍ಎನ್‍ಎಲ್ ಕಚೇರಿಯ ಆವರಣದಲ್ಲಿರುವ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಿಂದ ವರ್ಚುವಲ್ ಮೂಲಕ ಮಂಗಳವಾರ ಉದ್ಘಾಟಿಸಿದರು.

ಬೆಂಗಳೂರಿನಲ್ಲಿ ಪೊಲೀಸ್ ಗಸ್ತು ನಿರ್ವಹಣೆಗಾಗಿ ನವೀನ ತಂತ್ರಜ್ಞಾನದ ಸ್ಮಾರ್ಟ್ ಇ-ಬಿಟ್ ಗೆ ಚಾಲನೆ ನೀಡುವುದರ ಜೊತೆಗೆ ಬಳ್ಳಾರಿಯ ಎಫ್‍ಎಸ್‍ಎಲ್ ಸೆಂಟರ್ ಗೂ ವರ್ಚುವಲ್ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದರು.

ಈ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವು ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆ ಒಳಪಡಲಿವೆ.

ಬಳ್ಳಾರಿಯಲ್ಲಿ ಫೋ ರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ಸ್ಥಾಪನೆಯಾಗುವುದರಿಂದ ಇದುವರೆಗೆ ಕಲಬುರಗಿ ಎಫ್‍ಎಸ್‍ಎಲ್ ಮೇಲಿದ್ದ ಒತ್ತಡ ಕಡಿಮೆಯಾಗಲಿದ್ದು, ತ್ವರಿತ ಫೋ ರೆನ್ಸಿಕ್ ವರದಿಗಳು ಲಭ್ಯವಾಗಲಿವೆ. ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.

ಬಳ್ಳಾರಿಯಲ್ಲಿ ನಡೆದ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಮಾತನಾಡಿ,ಇನ್ಮುಂದೆ ಎಫ್‍ಎಸ್‍ಎಲ್ ವರದಿಗಳು ಬೇಗ ಬರಲಿವೆ. ಪ್ರಕರಣಗಳಲ್ಲಿ ಅರೋಪಗಳ ದೃಢಪಡುವಿಕೆಯ ಶೇಕಡಾವಾರು ಪ್ರಮಾಣ ತೀರಾ ಕಡಿಮೆ ಇದ್ದು; ಎಫ್‍ಎಸ್‍ಎಲ್ ಬಲಪಡಿಸಿದರೇ ಪೊಲೀಸರ ಸಾಕ್ಷ್ಯಾಧಾರಗಳು ಸ್ಟ್ರಾಂಗ್ ಆಗಲು ಮತ್ತು ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಮತ್ತು ಅಪರಾಧಗಳ ಪ್ರಮಾಣ ಕಡಿಮೆಯಾಗಲು ಸಹಕಾರಿಯಾಗಲಿದೆ ಎಂದರು.


ರಾಜ್ಯ ಸರಕಾರ ಈ ಎಫ್‍ಎಸ್‍ಎಲ್ ಕೇಂದ್ರಕ್ಕೆ ವಿಜ್ಞಾನಿಗಳು, ಸಿಬ್ಬಂದಿ ಹಾಗೂ ಅಗತ್ಯ ಸೌಕರ್ಯ ಸೇರಿ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದು,ಇನ್ನೂ ಅಗತ್ಯವಿದ್ದಲ್ಲಿ ಸ್ಥಳೀಯವಾಗಿ ಜಿಲ್ಲಾಡಳಿತ ಒದಗಿಸಲಿದೆ ಎಂದರು.

ಎಸ್ಪಿ ಸೈದುಲು ಅಡಾವತ್ ಅವರು ಮಾತನಾಡಿ, ಇದುವರೆಗೆ ಒಂದು ವರದಿ ಬರಬೇಕಾದರೇ ಎರಡು ತಿಂಗಳಾಗುತ್ತಿತ್ತು;ಇನ್ಮುಂದೆ ಹದಿನೈದು ದಿನಗಳಿಂದ ತಿಂಗಳೊಳಗೆ ವರದಿ ಕೈಸೇರಲಿದೆ.

ಬಜೆಟ್ ನಲ್ಲಿ ಘೋಷಣೆಯಾದ ಎರಡು ತಿಂಗಳಲ್ಲಿಯೇ ಎಫ್‍ಎಸ್‍ಎಲ್ ಕೇಂದ್ರವನ್ನು ಬಳ್ಳಾರಿಯಲ್ಲಿ ಅನುಷ್ಠಾನಗೊಳಿಸಲಾಗಿದೆ.

ನಾಳೆಯಿಂದಲೇ ಈ ಲ್ಯಾಬ್ ಕಾರ್ಯನಿರ್ವಹಿಸಲಿದೆ. ಎಲ್ಲ ಅಗತ್ಯ ಸಿಬ್ಬಂದಿ ಹಾಗೂ ಸೌಕರ್ಯಗಳನ್ನು ಸರಕಾರ ಒದಗಿಸಿದೆ ಎಂದರು. 

ಈ ಸಂದರ್ಭದಲ್ಲಿ ಎಫ್‍ಎಸ್‍ಎಲ್ ಸೆಂಟರ್‍ನ ಇಂಚಾರ್ಜ್ ಶ್ರೀಮತಿ ಜಿ.ಎನ್.ಪಾಟಿಲ್,  ಜಿಪಂ ಸಿಇಒ ಜಿ.ಲಿಂಗಮೂರ್ತಿ,ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಸಹಾಯಕ ಆಯುಕ್ತ ಡಾ.ಆಕಾಶ್, ಡಿವೈಎಸ್ಪಿ ರಮೇಶಕುಮಾರ್ ಸೇರಿದಂತೆ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಇದ್ದರು.




 


 


Tags

Post a Comment

0Comments

Post a Comment (0)