ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ.

varthajala
0

ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ) : ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

2022 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ. 50-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.  ರೂ.25-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ದಿನಾಂಕ 01-07-2022 ರಿಂದ ಪಡೆಯಬಹುದು.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in    ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584, 26612991,22423867, 26672992, 8661777643 ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.


Tags

Post a Comment

0Comments

Post a Comment (0)