ಸತ್ಯವ್ರತ, ಶ್ಯಾಮರಾಜ ಅಯ್ಯಂಗಾರ್, ಟಿ.ಆರ್.ಶಾಮಣ್ಣ, ಸೀತಾ ಶರಣ್ ಶರ್ಮ ಸ್ಮಾರಕ ದತ್ತಿ ಉಪನ್ಯಾಸ

varthajala
0

ಆಯೋಜನೆ : ಗಾಂಧಿ ಶಾಂತಿ ಪ್ರತಿಷ್ಠಾನ
ಸಹಯೋಗ : ಕರ್ನಾಟಕ ಗಾಂಧಿ ಸ್ಮಾರಕ ನಿಧಿ, 
ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು - ಗಾಂಧಿ ಅಧ್ಯಯನ ಕೇಂದ್ರ , ಅಮರ ಬಾಪು ಚಿಂತನ 

ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಗಾಂಧಿ ಅಧ್ಯಯನ ಕೇಂದ್ರ , ಅಮರ ಬಾಪು ಚಿಂತನ ಸಹಯೋಗದಲ್ಲಿ ಸತ್ಯವ್ರತ, ಶ್ಯಾಮರಾಜ ಅಯ್ಯಂಗಾರ್, ಟಿ.ಆರ್.ಶಾಮಣ್ಣ, ಸೀತಾ ಶರಣ್ ಶರ್ಮ ಸ್ಮಾರಕ ದತ್ತಿ ಉಪನ್ಯಾಸವನ್ನು ಜೂನ್ 18 ಶನಿವಾರ, ಸಂಜೆ 5.30 ಗಂಟೆಗೆ ನಗರದ ಶೇಷಾದ್ರಿಪುರಂನ ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಭಾಂಗಣ ಆಯೋಜಿಸಲಾಗಿದೆ.

ಹಿರಿಯ ಶಿಕ್ಷಣ ತಜ್ಞ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹಾಗೂ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ, ನಾಡೋಜ ಡಾ. ವೂಡೇ.ಪಿ. ಕೃಷ್ಣ ಕಾರ್ಯಕ್ರಮ ಉದ್ಘಾಟಿಸಿಲಿದ್ದಾರೆ. `ವರ್ತಮಾನ ಭಾರತ ಮತ್ತು ಗಾಂಧಿ ’ ವಿಷಯದ ಕುರಿತು ದತ್ತಿ ಉಪನ್ಯಾಸವನ್ನು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಕ್ರಂ ವಿಸಾಜಿ ನೀಡಲಿದ್ದಾರೆ. ವಿಶೇಷಾಹ್ವನಿತರಾಗಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ.ಮಲ್ಲೇಪುರಂ ಜಿ. ವೆಂಕಟೇಶ ಭಾಗವಹಿಸಲಿದ್ದಾರೆ .ಇದೇ ಸಂದರ್ಭದಲ್ಲಿ ಗಾಂಧಿ ತತ್ವ ಪ್ರಸರಣದ ದ್ವಿಭಾಷಾ-ದ್ವೆöÊಮಾಸಿಕ ಪತ್ರಿಕೆ ‘ಅಮರ ಬಾಪು ಚಿಂತನ’ದ ದಶಮಾನೋತ್ಸವ ವಿಶೇಷ ಸಂಚಿಕೆ ಬಿಡುಗಡೆಗೊಳ್ಳಲಿದೆ.

 ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಸತ್ಯಮಂಗಲ ಮಹಾದೇವ , ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಆಡಳಿತ ಸಲಹಾ ಮಂಡಳಿ ಅಧ್ಯಕ್ಷ ಪಿ.ಸಿ.ನಾರಾಯಣ , ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಹಾಗೂ ಆಂತರಿಕ ಗುಣಮಟ್ಟ ಭರವಸಾ ಸಮಿತಿ ಸಂಚಾಲಕಿ ನಾಗಸುಧಾ ಆರ್ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ . 

ವಿವರಗಳಿಗೆ ಸಂಪರ್ಕಿಸಿ : 97409 41126

Post a Comment

0Comments

Post a Comment (0)