ಮುಖ್ಯಮಂತ್ರಿ ಬೊಮ್ಮಾಯಿ‌ ಆಗಮಿಸುತ್ತಿರುವ ಹಿನ್ನೆಲೆ ನೂತನ ಕಟ್ಟಡಗಳ ಪರಿಶೀಲನೆ

varthajala
0

 ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಪೀಣ್ಯ ಸರ್ಕಾರಿ‌ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಾದರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ನೂತನ ಕಟ್ಟಡಗಳನ್ನು ಉದ್ಘಾಟಿಸಲು ಜುಲೈ 17ರಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ‌ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ವೇಲು ನಾಯ್ಕರ್, ವಾರ್ಡ್ ಅಧ್ಯಕ್ಷರಾದ ನಾಗೇಶ್, ಹಿರಿಯ ಬಿಜೆಪಿ ಮುಖಂಡರು, ಮಹಿಳಾ ಕಾರ್ಯಕರ್ತರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.









Post a Comment

0Comments

Post a Comment (0)