AAM AADMI PARTY KARNATAKA : ಶಿಕ್ಷಣ ಇಲಾಖೆಯ 40% ಭ್ರಷ್ಟಾಚಾರಕ್ಕೆ ಮಕ್ಕಳು ಬೆಲೆ ತೆರುತ್ತಿದ್ದಾರೆ: ಕುಶಲ ಸ್ವಾಮಿ

varthajala
0

ಕಳೆದ ಹಲವು ತಿಂಗಳುಗಳಿಂದ ರಾಜ್ಯ ಗುತ್ತಿಗೆದಾರರ ಸಂಘವು ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಭ್ರಷ್ಟಾಚಾರದಲ್ಲಿ  ಮುಳುಗಿದೆ ಎಂದು ಸಾಕಷ್ಟು ಆರೋಪಗಳನ್ನು ಮಾಡುತ್ತಿದ್ದಾರೆ. ಇದೀಗ  ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟವು ಸಹ  40 % ಕಮೀಷನ್  ಭ್ರಷ್ಟಾಚಾರದಿಂದಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ದುರವಸ್ಥೆಗೆ ತಲುಪಿದೆಯೆಂದು ಇತ್ತೀಚೆಗೆ ಪ್ರಧಾನಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಮಾನ್ಯತೆ ನವೀಕರಣ ಆರ್ ಟಿಇ , ಶುಲ್ಕ ಮರುಪಾವತಿ ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂಬ ಸಾಕ್ಷ್ಯಾಧಾರ ಸಮೇತ ಆರೋಪವನ್ನು ಮಾಡುತ್ತಿದ್ದಾರೆ.

ಕಣ್ಣು ಕಿವಿ ಕೇಳಿಸದ ಸರ್ಕಾರದ 40% ಭ್ರಷ್ಟಾಚಾರದಿಂದಾಗಿ ಇಂದು ರಾಜ್ಯದ ಅಮಾಯಕ ಮಕ್ಕಳು ತಮ್ಮ ಶಿಕ್ಷಣಕ್ಕಾಗಿ ದುಬಾರಿ ಬೆಲೆಯನ್ನು ತೆರುತ್ತಿರುವುದು ದುರಂತದ ವಿಷಯವೆಂದು  ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಮಹಿಳಾ ಅಧ್ಯಕ್ಷೆ ಕುಶಲ ಸ್ವಾಮಿ  ನೊಂದು ನುಡಿದರು.  ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಹಾಳುಗೆಡವಿದೆ. ವಿಧಿ ಇಲ್ಲದೆ ರಾಜ್ಯದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದುಬಾರಿ ಶಾಲಾ ಶುಲ್ಕಗಳನ್ನು ವರ್ಷ ವರ್ಷವೂ  ಕಟ್ಟಿ ಕಟ್ಟಿ ಸರ್ಕಾರದ ಭ್ರಷ್ಟಾಚಾರ ನೀತಿಯಿಂದಾಗಿ ಜನಸಾಮಾನ್ಯನ  ಬದುಕೇ ದುರ್ಬರವಾಗುತ್ತಿರುವುದು  ಕಟುವಾಸ್ತವ ವಿಚಾರವಾಗಿದೆ. ಬಿಜೆಪಿ ಸರ್ಕಾರದ ಲಂಚಕೋರತನ , ದುರಾಡಳಿತಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಕುಶಲ ಸ್ವಾಮಿ ಮಾರ್ಮಿಕವಾಗಿ ತಿಳಿಸಿದರು.

ಬಿಜೆಪಿಯವರು ರಾಜ್ಯದಲ್ಲಿ ಅನೈತಿಕ ಸರ್ಕಾರವನ್ನು ನಡೆಸಿ ರಾಜ್ಯದ ಖಜಾನೆಯನ್ನು ಲೂಟಿ ಹೊಡೆಯುವ ಪ್ರಕ್ರಿಯೆಯಲ್ಲಿ ಇದೀಗ ಶಿಕ್ಷಣ ಕ್ಷೇತ್ರವನ್ನು ಸಹ ಬಿಡದೆ ರಾಜ್ಯದ ವಿದ್ಯಾರ್ಥಿಗಳನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಕುಶಲ ಸ್ವಾಮಿ ವಿಷಾದ ವ್ಯಕ್ತಪಡಿಸಿದರು.

ಈ ಬಗ್ಗೆ ಆಮ್ ಆದ್ಮಿ ಪಕ್ಷವು ತೀವ್ರ ಚಿಂತನೆಯನ್ನು ನಡೆಸಿ ಸರ್ಕಾರವು ಶಿಕ್ಷಣ ವ್ಯವಸ್ಥೆಯಲ್ಲಿ ನಡೆಸುತ್ತಿರುವ ಅವ್ಯವಹಾರಗಳನ್ನು ತಡೆಗಟ್ಟುವ ದಿಸೆಯಲ್ಲಿ ಮುಂದಿನ ದಿನಗಳಲ್ಲಿ  ಕಾರ್ಯೋನ್ಮುಖರಾಗುತ್ತಿದ್ದೇವೆ ಹಾಗೂ ರಾಜ್ಯದ ಮನೆಮನೆಗಳಿಗೂ ಸರ್ಕಾರದ ಭ್ರಷ್ಟಾಚಾರ ನೀತಿಯನ್ನು ತಲುಪಿಸುತ್ತೇವೆ ಎಂದು  ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮಾಧ್ಯಮ ವಕ್ತಾರೆ  ಉಷಾ ಮೋಹನ್ ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಹಿಳಾ ನಾಯಕಿ ಮರಿಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Post a Comment

0Comments

Post a Comment (0)