"ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ" ಜಾಗೃತಿ ಮ್ಯಾರಥಾನ್ ಯಡಿಯೂರಪ್ಪರಿಂದ ಪೋಸ್ಟರ್ ಬಿಡುಗಡೆ

varthajala
0

 "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ" ಜಾಗೃತಿ ಮ್ಯಾರಥಾನ್, ಮಾಜಿ ಸಿಎಂ .ಬಿಎಸ್.ಯಡಿಯೂರಪ್ಪರಿಂದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಕಾವೇರಿ ನಿವಾಸದಲ್ಲಿ "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ" ಕುರಿತು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹೈ ಕೋರ್ಟ್ ನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟದ ಭಿತ್ತಿಪತ್ರವನ್ನ ಕರ್ನಾಟಕ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರು ಬಿಡುಗಡೆಗೊಳಿಸಿದರು!


ಸೆಪ್ಟೆಂಬರ್ 17 ರಂದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನದ ಅಂಗವಾಗಿ ನವದೆಹಲಿಯಲ್ಲಿ "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ" ದ ಕುರಿತು ರಾಷ್ಟ್ರ ಮಟ್ಟದಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಭವನದಿಂದ ಕೆಂಪು ಕೋಟೆವರೆಗೂ ತಡೆರಹಿತವಾಗಿ 3 ಗಂಟೆಗಳ ಕಾಲ ಮ್ಯಾರಥಾನ್ ಓಟದ ಕಾರ್ಯಕ್ರಮವನ್ನ  ಹಮ್ಮಿಕೊಂಡಿದ್ದರ ಭಿತ್ತಿ ಪತ್ರವನ್ನ ಬಿಡುಗಡೆಗೊಳಿಸಿ ಕರ್ನಾಟಕದ ವ್ಯಕ್ತಿಯೊಬ್ಬ ರಾಷ್ಟ್ರಮಟ್ಟದಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ಪ್ರಯತ್ನ ಪ್ರಶಂಶನೀಯವೆಂದರು,

Post a Comment

0Comments

Post a Comment (0)