ಕರ್ನಾಟಕದ 22ನೇ ಮುಖ್ಯಮಂತ್ರಿ.ಸಿದ್ದರಾಮಯ್ಯ ರಾಜಕೀಯ ಜೀವನ

varthajala
0

ಸಿದ್ದರಾಮಯ್ಯ (ಜನನ- 12 ಆಗಸ್ಟ್, 1948) ಕರ್ನಾಟಕದ 22ನೇ ಮುಖ್ಯಮಂತ್ರಿ. ೨೦೧೩ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕದ 22 ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅನುಭವಿ ರಾಜಕಾರಣಿ.

ಬಾಲ್ಯ

ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ ೧೯೪೮ರ ಆಗಸ್ಟ್ ೧೨ ರಂದು ಜನಿಸಿದರು. ಇವರ ತಂದೆ ಸಿದ್ಧರಾಮೇಗೌಡ, ತಾಯಿ-ಬೋರಮ್ಮ. ಇವರದು ತುಂಬು ಮನೆಯ ಅವಿಭಕ್ತ ಕುಟುಂಬ. ಚಿಕ್ಕಂದಿನಲ್ಲೇ ಜಾನಪದ ನೃತ್ಯ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ನೃತ್ಯಗಳನ್ನು ಕಲಿತಿದ್ದಾರೆ. ಹತ್ತನೇ ವರ್ಷದವರೆಗೆ ಇವರು ಶಾಲೆಗೇ ಹೋಗಿರಲಿಲ್ಲ. ನೇರವಾಗಿ ಐದನೇ ತರಗತಿಗೆ ಶಾಲೆಗೆ ಪ್ರವೇಶ ಪಡೆದು ವಿದ್ಯಾಭ್ಯಾಸ ಮುಂದುವರೆಸಿದರು.

ವಿದ್ಯಾಭ್ಯಾಸ

ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ತಮ್ಮ ಹುಟ್ಟೂರಿನಲ್ಲೂ, ಪಿ.ಯು.ಸಿ.ಯನ್ನು ಮೈಸೂರಿನಲ್ಲಿ, ಬಿ.ಎಸ್ಸಿಯನ್ನು ಯುವರಾಜ ಕಾಲೇಜಿನಲ್ಲಿ ಓದಿದರು. ನಂತರ ಮೈಸೂರು ವಿವಿಯಿಂದ ಕಾನೂನು ಪದವಿ ಪಡೆದು, ಚಿಕ್ಕಬೋರಯ್ಯ ಎಂಬ ವಕೀಲರ ಬಳಿ ಜೂನಿ ಯರ್ ಆಗಿ ನಂತರ ೧೯೭೮ರವರೆಗೆ ಸ್ವಂತ-ವಕೀಲಿ ವೃತ್ತಿ ನಡೆಸಿದರು.

ರಾಜಕೀಯ ಜೀವನ

1983 ರ ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದೆಡೆ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು.

1985ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು. , ಪಶುಸಂಗೋಪನೆ ಸಚಿವರನ್ನಾಗಿ ನೇಮಕ. . ಸಂಪುಟ ಪುನರ್ರಚನೆಯ ನಂತರ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.

1989 ರ ಕಾಂಗ್ರೆಸ್ ಅಲೆಯಲ್ಲಿ ಚುನಾವಣೆ ಸೋತ ಸಿದ್ಧರಾಮಯ್ಯ, ಜನತಾ ಪಕ್ಷ ಹೋಳಾದಾಗ ಜನತಾದಳ ಸೇರಿದರು. ೧೯೯೨ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ, ಜನತಾದಳದ ಕಾರ್ಯದರ್ಶಿಯಾದರು.

1994 ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು.

1999 ರ ಚುನಾವಣೆಯ ಹೊತ್ತಿಗೆ ಜನತಾ ದಳ ೨ ಭಾಗವಾದಾಗ, ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು.

1999 ಚುನಾವಣೆಯಲ್ಲಿ ಸೋಲು .

2004ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು.

2004ರಲ್ಲಿ ಅತಂತ್ರ ವಿಧಾನಸಭೆ ರಚನೆಯಾದಾಗ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ ೨ ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದರು,

2006ರ ಡಿಸೆಂಬರ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದರು.

2008ರಲ್ಲಿ ಗೆದ್ದ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಗೆಲುವು.

2013ರ ಚುನಾವಣೆಯ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ.

ಮೇ 10 2013  ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ, ಮೇ ೧೩ ೨೦೧೪ರಂದು ಕರ್ನಾಟಕದ ೨೨ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. (13 ಮೇ 2013)

ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಮಾಡಿದರು ಮತ್ತು ದಲಿತವರ್ಗಗಳಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸನ್ನು ನೀಡಿದ್ದರು.

12-05-2018  ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಅವುಗಳಲ್ಲಿ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿಯಲ್ಲಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು

ಈಗ ಗುರುವಾರ ಅಂದರೆ 18 ನೇ 2023 ರಂದು ಎರಡನೇ ಬಾರಿಗೆ ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

Post a Comment

0Comments

Post a Comment (0)