ಚಿಕ್ಕಬಳ್ಳಾಪುರ: ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ : ಜಿಲ್ಲಾಧಿಕಾರಿ ಸ್ಪಷ್ಟನೆ

varthajala
0

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್

ವಾರ್ತಾಜಾಲ,ಚಿಕ್ಕಬಳ್ಳಾಪುರ/ ಶಿಡ್ಲಘಟ್ಟ

 


ಕಾವೇರಿ ವಿಚಾರವಾಗಿ ಸೆ.29 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆ ಎಂದಿನಂತೆ ಶಾಲಾ, ಕಾಲೇಜುಗಳು ಕಾರ್ಯನಿರ್ವಹಿಸಲಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸ್ಪಷ್ಪಪಡಿಸಿದ್ದಾರೆ. ಈ ಕುರಿತು ತಮ್ಮನ್ನು ವಾರ್ತಾಜಾಲ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಶುಕ್ರವಾರ ಜಿಲ್ಲೆಯಲ್ಲಿ ಶಾಲಾ. ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದರು.

ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟದಲ್ಲಿ ಮಾತ್ರ ಕೆಲ ಕನ್ನಡಪರ ಸಂಘಟನೆಗಳು ಕಾವೇರಿ ವಿಚಾರವಾಗಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ಘೋಷಿಸಿದ್ದು ಉಳಿದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ಕರ್ನಾಟಕ ಬಂದ್‌ಗೆ ಬೆಂಬಲ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆಯಲ್ಲಿ ಕರ್ನಾಟಕ ಬಂದ್ ಆಚರಿಸುವ ನಿಟ್ಟಿನಲ್ಲಿ ಯಾವ ಸಂಘಟನೆಗಳು ಇನ್ನೂ ಮುಂದೆ ಬಂದಿಲ್ಲ.

Post a Comment

0Comments

Post a Comment (0)