ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ ರವರಿಗೆ ಪ್ರತಿಷ್ಠಿತ ‘ಪಾಂಚಜನ್ಯ ಪುರಸ್ಕಾರ’

varthajala
0

 ಡಿ.೦೯  , ಶನಿವಾರ ಪಾಂಚಜನ್ಯ ಪ್ರತಿಷ್ಠಾನದ ಹನ್ನೊಂದನೇ ವಾರ್ಷಿಕೋತ್ಸವ ಮತ್ತು ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ  ರವರಿಗೆ ೨೦೨೩ನೇ ಸಾಲಿನ ಪ್ರತಿಷ್ಠಿತ ‘ಪಾಂಚಜನ್ಯ ಪುರಸ್ಕಾರ’ ಪ್ರದಾನ ಸಮಾರಂಭ.



ಆಧ್ಯಾತ್ಮಿಕತೆಯ ತಳಹದಿಯ ಮೇಲೆ ಅಕ್ಷರ - ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪಾಂಚಜನ್ಯ ಪ್ರತಿಷ್ಠಾನದ ಕಳೆದ  ಹತ್ತು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ . ಪ್ರತಿಷ್ಠಾನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಕ್ಷರ, ಆರೋಗ್ಯ , ಅಧ್ಯಾತ್ಮ ಕ್ಷೇತ್ರದಲ್ಲಿನ ಸಾಧಕ ಶ್ರೇಷ್ಠರನ್ನು ಗುರುತಿಸಿ ಪಾಂಚಜನ್ಯ ಪುರಸ್ಕಾರ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

ಡಿ ೦೯ , ಶನಿವಾರ ಮಧ್ಯಾಹ್ನ ೧೨.೦೦ ಗಂಟೆಗೆ ಬೆಂಗಳೂರು ಜಯನಗರ ೪ನೇ ಬ್ಲಾಕ್‌ನ ಯುವಪಥ , ವಿವೇಕ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ  ರವರಿಗೆ  ಅವರಿಗೆ ಪ್ರಸ್ತುತ ವರ್ಷದ ಪಾಂಚಜನ್ಯ ಪುರಸ್ಕಾರವನ್ನು ನೀಡಿ ಪುರಸ್ಕರಿಸಲಾಗುವುದು. ಆರ್.ವಿ.ಶಿಕ್ಷಣ ಸಮೂಹದ ನಿರ್ದೇಶಕರು – ಯೋಜನೆ ಡಾ.ಟಿ.ವಿ.ರಾಜು ರವರು ಪ್ರಶಸ್ತಿ ಪ್ರದಾನ ಮಾಡುವರು. ಬಿಹೆಚ್‌ಎಸ್ ಉನ್ನತ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಡಾ.ಕೆ.ಎಸ್.ಸಮೀರ ಸಿಂಹ, ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಎಂಇಎಸ್ ಶಿಕ್ಷಣ ಸಮೂಹ ಶೈಕ್ಷಣಿಕ ನಿರ್ದೇಶಕರು ಡಾ.ಹೆಚ್.ಎಸ್.ಗಣೇಶ ಭಟ್ಟ ಪಾಲ್ಗೊಳ್ಳುವರು ಮತ್ತು ಕಾರ್ಯಕ್ರಮವನ್ನು ಆರ್ಕಿಡ್ ಲ್ಯಾಮಿನೇಟ್ಸ್ ಪ್ರೆöÊ ಲಿ. ಮತ್ತು ಬ್ಲೂನೀಮ್ ಮೆಡಿಕಲ್ ಡಿವೈಸೆಸ್ ಪ್ರೆöÊ.ಲಿ. ರವರು ಪ್ರಾಯೋಜಿಸಿದ್ದಾರೆ , ಪ್ರತಿಷ್ಠಾನ ಟ್ರಸ್ಟೀಗಳಾದ ಎಸ್.ವಿ.ಸುಬ್ರಹ್ಮಣ್ಯ , ಅನಂತ ವೇದಗರ್ಭಂ ಹಾಗು ವೆಂಕಟೇಶ ಆರ್. ವೇದಾಂತಿ ಉಪಸ್ಥಿತರಿರುವರು ಎಂದು ಸಂಸ್ಥಾಪಕ ಗೌ.ಕಾರ್ಯದರ್ಶಿ ಮುರಳಿ ಎಸ್.ಕಾಕೋಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವರಗಳಿಗೆ ೯೮೪೫೦ ೭೫೨೫೦


ಪ್ರಶಸ್ತಿ ಪುರಸ್ಕೃತ ಕಿರು ಪರಿಚಯ : ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ  

ಶ್ರಿ ಸುರೇಶ್ ವಿ.ಕುಲಕರ್ಣಿ, ಬಿಎಸ್ಸಿ, ಬಿಎಡ್, ಎಂಎ, ಜಿಡಿ ಆರ್ಟ್ಸ್, ಜಿಡಿ ಮಾಡೆಲಿಂಗ್, ನಿವೃತ್ತ ಮುಖ್ಯೋಪಾಧ್ಯಾಯ   ಕೆ.ಇ. ಬೋರ್ಡ್, ಧಾರವಾಡ ಮತ್ತು ಪ್ರಸಿದ್ಧ ಕಲಾವಿದ ಮತ್ತು ದ ರಾ ಬೇಂದ್ರೆ ಕುರಿತು ಮಾತನಾಡುವ ವಾಗ್ಮಿ. ಶ್ರೀ ಕುಲಕರ್ಣಿಯವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಇಡಿ ಪರೀಕ್ಷೆಯಲ್ಲಿ ೪ನೇ ಸ್ಥಾನ ಪಡೆದರು; ವನ್ಯಜೀವಿ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಜಿ.ಡಿ.ಆರ್ಟ್ಸನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪ್ರಕಟವಾಗುವ "ವಿಜ್ಞಾನ ಸಂಗತಿ" (ವಿಜ್ಞಾನ ಮಾಸಿಕ ಪತ್ರಿಕೆ) ಸಂಪಾದಕರಾಗಿದ್ದರು. ಆಕಾಶವಾಣಿ ಧಾರವಾಡದಿಂದ ಶ್ರೀ ಕುಲಕರ್ಣಿಯವರ ೧೦೦ಕ್ಕೂ ಹೆಚ್ಚು ಕಾರ್ಯಕ್ರಮಗಳು ಪ್ರಸಾರವಾಗಿವೆ.

"ಸೇವಾಯಜ್ಞದಲ್ಲಿ..."

ಪಾಂಚಜನ್ಯ ಪ್ರತಿಷ್ಠಾನದ ಕಿರು ಪರಿಚಯ.  


ಸಮಾನ ಮನೋಧರ್ಮದ ಗೆಳೆಯರು ಒಂದಾಗಿ ಗ್ರಾಮೀಣ ಪ್ರದೇಶದಲ್ಲಿ ಅಕ್ಷರ ,ಆರೋಗ್ಯ ಮತ್ತು ಅಧ್ಯಾತ್ಮ ವೆಂಬ ಮಂತ್ರಗಳ ಬುನಾದಿಯ ಮೇಲೆ ಭವ್ಯ ಸಮಾಜ ನಿರ್ಮಾಣದ ದೀಕ್ಷೆ ತೊಟ್ಟು, ಹಲವಾರು ಜನಮುಖಿ ಕರ‍್ಯಗಳನ್ನು ನಡೆಸುತ್ತ ಸಾರ್ಥಕ ಒಂದು ದಶಕದಿಂದ ನಿಸ್ವಾರ್ಥ ಚಿಂತನೆ ವಿಶಾಲದೃಷ್ಟಿಯಿಂದ ಸದ್ದಿಲ್ಲದೆ ಸೇವಾಕ್ರಾಂತಿ ಮಾಡುತ್ತ ಬಂದಿದೆ. ಪಾಂಚಜನ್ಯ ಮೊಳಗುವುದಕ್ಕಾಗಿ ಅಲ್ಲ, ದೀನರ ಬಾಳು ಬೆಳಗುವುದಕ್ಕಾಗಿ  ಉದಯವಾಗಿದೆ.


ಪ್ರತಿ ವರ್ಷ ವಾರ್ಷಿಕೋತ್ಸವ ಸಂದರ್ಭದಲ್ಲಿ  ಅಕ್ಷರ ,ಆರೋಗ್ಯ ಮತ್ತು ಅಧ್ಯಾತ್ಮ ಕ್ಷೇತ್ರದಲ್ಲಿ ಅವಿರತ ಸೇವಾ- ಸಾಧನೆಯನ್ನು ಮಾಡುತ್ತಿರುವ ಸಾಧಕೋತ್ತಮರಿಗೆ ಪ್ರತಿಷ್ಠಿತ ಪಾಂಚಜನ್ಯ ಪುರಸ್ಕಾರ ಗೌರವಾರ್ಪಣೆ ಮಾಡಲಾಗುವುದು.

ಸಹಾನುಭೂತಿಯ ಸಂವೇದನೆಯೊAದಿಗೆ ಗಮನಿಸುವಾಗ ಬದಲಾವಣೆ ಹೇಗೆ ಸಾಧ್ಯ ಎಂದು ತಿಳಿಯದೇ ಅಸಹಾಯಕತೆಯೂ(ಯೇ) ಮನೆಮಾಡಿ ಜನರಲ್ಲಿ ಉದಾಸೀನ ಮೂಡುವುದು ಸಹಜ ,ಹಾಗಿರುವಾಗ ಬದಲಾವಣೆಯ ದಾರಿಯನ್ನು ತೋರಿಸಿ , ಪೋಷಿಸಿದಾಗ ಅಸಹಾಯಕತೆಯೂ ದೂರವಾಗುತ್ತದೆ. ಜೊತೆಗೆ ಕಣ್ಣಿಗೆ ಕಾಣುವ ಬದಲಾವಣೆಯೂ ಸಾಧ್ಯ ಎಂದು ಪಾಂಚಜನ್ಯ ಪ್ರತಿಷ್ಠಾನ ನಂಬಿಕೊAಡು ಬಂದಿದೆ . ನಿಮಗೂ ಪಾಂಚಜನ್ಯ ಪ್ರತಿಷ್ಠಾನದೊಂದಿಗೆ ಜೋಡಿಸಿಕೊಳ್ಳಬೇಕೆನಿಸಿದರೆ ಕರೆಮಾಡಿ ೯೮೪೫೦ ೭೫೨೫೦ ಹಾಗೂ ಸಮಾಜದಲ್ಲಿನ ಬದಲಾವಣೆಗೆ ಪಾತ್ರರಾಗಿರಿ .


Post a Comment

0Comments

Post a Comment (0)