ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 : ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ

varthajala
0

 ಬೆಂಗಳೂರು, ಏಪ್ರಿಲ್ 24 (ಕರ್ನಾಟಕ ವಾರ್ತೆ): ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದ್ದು, ಜನತ್ತಿನ ಅತಿದೊಡ್ಡ ಪ್ರಜಾಪಭುತ್ವ ದೇಶವಾಗಿರುವ ನಮ್ಮ ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆ – 2019 ಹಾಗೂ ಸಾರ್ವತ್ರಿಕ ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾ ಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.


ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು /ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆಯೊಂದಿಗೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಮನೆ ವಿಳಾಸ, ಮೋಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : mediacellceokarnataka@gmail.com     ಗೆ ಸಲ್ಲಿಸುವುದು. ಫೆÇೀಟೊಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 15-05-2024 ರಂದು ಬುಧವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.
ಆಯ್ಕೆಗೊಂಡ ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ 25,000/-,  ದ್ವಿತೀಯ ಬಹುಮಾನ 15,000/-, ತೃತೀಯ ಬಹುಮಾನ 10,000/-, ಸಮಾಧಾನಕರ ಬಹುಮಾನ 6,000/- ಹಾಗೂ ವಿಶೇಷ ಬಹುಮಾನ 5,000/-ರೂ.ಗಳಂತೆ ಒಟ್ಟು  61,000/- ರೂ.ಗಳ ಬಹುಮಾನವನ್ನು ನೀಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)