ಕೋಲಾರ : ಕಾಂಗ್ರೇಸ್ ಅಭ್ಯರ್ಥಿ ಕೆ.ವಿ ಗೌತಮ್ ನಾಮಪತ್ರ ಸಲ್ಲಿಕೆಗೆ ರಾಜೀವ್ ಗೌಡ ಸಾಥ್

varthajala
0

 ಶಿಡ್ಲಘಟ್ಟ: ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ ಗೌತಮ್ ನಾಮಪತ್ರ ಸಲ್ಲಿಕೆಗೆ ಶಿಡ್ಲಘಟ್ಟ ಕ್ಷೇತ್ರದ ರಾಜೀವ್ ಗೌಡಗೌಡ ಹಾಗೂ ಆಹಾರ ಸಚಿವ ಕೆಹೆ್ ಮುನಿಯಪ್ಪ ಅವರ ಜೊತೆಗೂಡಿ ಗುರುವಾರ ಕೋಲಾರ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮಪತ್ರ  ಸಲ್ಲಿಸಿದರು.


ನಂತರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಮುಖಂಡ ರಾಜೀವ್ ಗೌಡ ಮಾತನಾಡಿ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರು ನಾಮಪತ್ರ ಸಲ್ಲಿಸಿದ್ದು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು ಸಾವಿರ ಜನಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಿ ಅವರಿಗೆ ಶುಭ ಹಾರೈಸಿದ್ದೇವೆ ಹಾಗೆಯೇ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ನೀಡುವುದರ ಮೂಲಕ ಕಾಂಗ್ರೇಸ್ ಭದ್ರಕೋಟೆಯಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮತ್ತೆ  ಕಾಂಗ್ರೇಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮತ್ತೆ ಕಾಂಗ್ರೇಸ್ ಭದ್ರಕೋಟೆಯನ್ನಾಗಿ ಮಾಡುತ್ತೇವೆ. ಕೆವಿ ಗೌತಮ್ ಗೆಲುವಿಗೆ ಶಿಡ್ಲಘಟ್ಟ ಕ್ಷೇತ್ರದಿಂದ ಅತ್ಯಧಿಕ ಬಹುಮತ ತಂದು ಕೊಡುವ ವಿಶ್ವಾಸವಿದೆ ಎಂದರು.



 ಆಹಾರ ಸಚಿವ  ಕೆ.ಎಚ್ ಮುನಿಯಪ್ಪ ಮಾತನಾಡಿ ಕಾಂಗ್ರೇಸ್ ಪಕ್ಷಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತದೆ. ಜಾತ್ಯಾತೀತ ಸಿದ್ಧಾಂತಗಳ ಮೇಲೆ ನಿಂತಿರುವ ಕಾಂಗ್ರೇಸ್ ಪಕ್ಷದಲ್ಲಿ 40 ವರ್ಷಗಳಿಂದ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕಾಂಗ್ರೇಸ್ ಪಕ್ಷದಿಂದ ಒಬ್ಬರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಅದರಂತೆ ಅವರನ್ನು ಗೆಲ್ಲಿಸಿಕೊಳ್ಳಲು ಎಲ್ಲರೂ ಒಂದಾಗಿ ದುಡಿಯುತ್ತೇವೆ. ಕೋಲಾರ ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಮೂರು ಸಚಿವರಿಗೆ ನೀಡಲಾಗಿದ್ದು ಮುಕ್ತ ಮನಸ್ಸಿನಿಂದ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡುತ್ತೇವೆ ಜಿಲ್ಲಾ ಉಸ್ತುವಾರಿ ಸಚಿವರು ಯಾವಾಗ ಪ್ರಚಾರಕ್ಕೆ ಕರೆದರೆ ಆಗ ಬಂದು ಕೆಲಸ ಮಾಡುತ್ತೇನೆ ಎಂದರು.

ಇದಕ್ಕೂ ಮೊದಲು ಅಭ್ಯರ್ಥಿ ಕೆ.ವಿ ಗೌತಮ್ ಅವರು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಕ್ಲಾಕ್ ಟವರ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ನೇರವಾಗಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಲು ಬೆಳಿಗ್ಗೆ 11 ಗಂಟೆಗೆ ಸಮಯ ಕೋರಿದ್ದ ಕೆ.ವಿ ಗೌತಮ್ ನಿಗದಿತ ಸಮಯಕ್ಕೆ ಕಚೇರಿಗೆ ಬಂದರು ಮೊದಲ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್, ನಸೀರ್ ಅಹಮದ್, ಶಾಸಕ ಎಸ್.ಎನ್ ನಾರಾಯಣಸ್ವಾಮಿ ಭಾಗವಹಿಸಿದ್ದರು.

ನಂತರ ಎರಡನೇ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಕೆಜಿಎಫ್ ಶಾಸಕಿ ರೂಪ ಶಶಿಧರ್, ಶಿಡ್ಲಘಟ್ಟ ಮುಖಂಡ ರಾಜೀವ್ ಗೌಡ ಜೊತೆಯಲ್ಲಿ ಇದ್ದು ಇವರಿಗೆ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತಾ, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ ನಂಜೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಮುಂತಾದವರು ಸಾಥ್ ನೀಡಿದರು. 

Tags

Post a Comment

0Comments

Post a Comment (0)