ಮೇ 28 ರಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕಾರ್ಯ ಪರಿಶೀಲನೆ

varthajala
0

 ಬೆಂಗಳೂರು, ಮೇ 27 (ಕರ್ನಾಟಕ ವಾರ್ತೆ): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಮೇ 28 ರಂದು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯ ಕಾರ್ಯವಿಧಾನಗಳನ್ನು ಬೆಂಗಳೂರು ನಗರದ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕಾರ್ಯವು ಮೇ 5ರಿಂದ ರಾಜ್ಯಾದ್ಯಂತ ನಡೆಯುತ್ತಿದ್ದು, ಸಮೀಕ್ಷೆಯ ಕಾರ್ಯವಿಧಾನಗಳನ್ನು ಖುದ್ದು ಪರಿಶೀಲನೆ ಮಾಡಲು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಮೇ 28 ರಂದು ಬೆಳಿಗ್ಗೆ 9.00 ಗಂಟೆಯಿಂದ ಬೆಂಗಳೂರು ನಗರದ ಗೆದ್ದಲಹಳ್ಳಿ (ಸಂಜಯನಗರ), ಬ್ಯಾಟರಾಯಣಪುರ, ಯಲಹಂಕ, ಯಶವಂತಪುರ, ಮಲ್ಲೇಶ್ವರಂ, ಪ್ಯಾಲೆಸ್ ಗುಟ್ಟಹಳ್ಳಿ ಭೇಟಿ ನೀಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)