ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ ಎರಡು ವರ್ಷವನ್ನು ಪೂರ್ಣಗೊಳಿಸಿದೆ, ಈ ಹಿನ್ನೆಲೆ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದೆ, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಲ್ಲಿ ಸಂಭ್ರಮ ಮನೆ ಮಾಡಿದೆ, ಇದರ ನಡುವೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಾಹೀರಾತು ವಾರ್ ಕೂಡಾ ನಡೆದಿದೆ,
ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆ ಜಾಹೀರಾತು ನೀಡಿರುವ ಕಾಂಗ್ರೆಸ್ ಪ್ರಗತಿಯತ್ತ ಕರ್ನಾಟಕ, ಸಮರ್ಪಣೆಯ ಸಂಕಲ್ಪ ಎರಡು ವರ್ಷಗಳ ಸಾಧನೆಯ ಸಮರ್ಪಣೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ, ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಎಂದು ಹೊಗಳಿಕೊಂಡಿದೆ,
ಆದರೆ ಇತ್ತ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ತಪ್ಪುಗಳನ್ನೇ ಕೆದಕಿ ಹಾಕಿರುವ ಬಿಜೆಪಿ ಜಾಹೀರಾತಿನಲ್ಲಿ ದುಬಾರಿ ಜೀವನ, ಅಭಿವೃದ್ಧಿ ಶೂನ್ಯ ಇದುವೇ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಕೆಯ ಸಾಧನೆ 50 ಕ್ಕೂ ಹೆಚ್ಚು ವಲಯುಗಳ ಬೆಲೆ ಏರಿಕೆ ಕರ್ನಾಟಕದ ಲೂಟಿಯೇ ಕಾಂಗ್ರೆಸ್ ಡ್ಯೂಟಿ, ಹೆಜ್ಜೆ ಇಡದ ಎರಡು ವರ್ಷ, ಬೆಲೆ ಏರಿಕೆ, ಭ್ರಷ್ಟತೆಯ ಕರಾಳ ಸ್ಪರ್ಷ ಎಂದು ಬರೆದಿದೆ,