ಸಂಚಾರಿ ಪೊಲೀಸರ ಎಡವಟ್ಟಿಗೆ ಮಗು ಬಲಿ

varthajala
0

 




ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಬೈಕ್ ಸವಾರನೋರ್ವ ತನ್ನ ನಿಯಂತ್ರಣ ಕಳೆದುಕೊಂಡ ಪರಿಣಾಮ ಮಗು ಸಮೇತ ನೆಲಕ್ಕೆ ಬಿದ್ದಿದ್ದು, ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿಟ್ಟು ಸಾವನ್ನಪ್ಪಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನಲ್ಲಿ ನಡೆದಿದೆ,
ಗೊರವನಹಳ್ಳಿ ಗ್ರಾಮದ ವಾಣಿ-ಆಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ,
ಅಶೋಕ್ ಅವರು ತಮ್ಮ ಬೈಕ್ ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಪೊಲೀಸರು ಹೆಲ್ಮೆಟ್ ತಪಾಸಣೆಗೆಂದು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೈಕ್ ಸಮೇತ ನೆಲಕ್ಕೆ ಬಿದ್ದಿದ್ದಾರೆ,
ಅಶೋಕ್ ಬಲವಾಗಿ ಬ್ರೇಕ್ ಹಿಡಿದರಿಂದ ಆಯತಪ್ಪಿ ಮಗು ಹಾಗೂ ತಾಯಿ ವಾಣಿ ಸಮೇತ ನೆಲಕ್ಕೆ ಬಿದ್ದಿದ್ದಾರೆ, ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಸ್ಧಳದಲ್ಲೇ ಸಾವನ್ನಪ್ಪಿದೆ,
ಸದ್ಯ ಸಂಚಾರಿ ಪೊಲೀಸರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದು, ಮಗುವಿನ ಸಾವಿಗೆ ಪೊಲೀಸರೇ ಕಾರಣ ಎಂದು ಕಿಡಿಕಾರಿದ್ದಾರೆ, ಕೂಡಲೇ ಸ್ಧಳಕ್ಕೆ ಆಗಮಿಸಿದ ಅಧಿಕಾರಿಗಳು ಮಗುವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಧಳೀಯ ಆಸ್ಪತ್ರೆಗೆ ರವಾನಿಸಲಗಿದೆ,

Tags

Post a Comment

0Comments

Post a Comment (0)