ಪವನಶಕ್ತಿ ವಲಯದಲ್ಲಿ ವಿಪುಲ ಅವಕಾಶಗಳಿವೆ: ಸಚಿವ ಪ್ರಹ್ಲಾದ್ ಜೋಶಿ

varthajala
0

ಬೆಂಗಳೂರು, ಜೂ, 15; ಪವನಶಕ್ತಿ ವಲಯದಲ್ಲಿ ಕರ್ನಾಟಕದಲ್ಲಿ ವಿಫುಲ ಅವಕಾಶಗಳಿವೆ ಎಂದು ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಪಿಎಂ-ಕುಸುಮ್ ಯೋಜನೆಗೆ ಹೆಚ್ಚಿನ ಉತ್ತೇಜನವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಈ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿವೆ.

ಭವಿಷ್ಯದಲ್ಲಿ ಇಂಧನ ಕ್ಷೇತ್ರದಲ್ಲಿ ದೇಶದ ಬಲವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ಕೇಂದ್ರ ಸರ್ಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ಜಾಗತಿಕ ಪವನ ದಿನಾಚರಣೆ 2025’ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಇಂದು ಆಯೋಜಿಸಿತ್ತು.  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು,  ಇಂಧನದ ಗುರಿಗಳನ್ನು ಸಾಧಿಸಲು ಮತ್ತು ಪವನ ಶಕ್ತಿಯಲ್ಲಿ ಮುನ್ನಡೆಯಲು ಸಾಮೂಹಿಕ ಕ್ರಮ ಅಗತ್ಯ. ವಿಶ್ವಾಸಾರ್ಹ ಗ್ರಿಡ್‌ಗೆ ಸೌರ ಮತ್ತು ವಾಯು ಶಕ್ತಿಯನ್ನು ಸಂಯೋಜಿಸುವುದು ಅತ್ಯಗತ್ಯ ಎಂದು ಹೇಳಿದರು. 2030 ರ ವೇಳೆಗೆ 500 ಗಿಗಾ ವ್ಯಾಟ್‌ಗೆ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಕಳೆದ 10 ವರ್ಷಗಳಲ್ಲಿ 51.5 ಗಿಗಾ ವ್ಯಾಟ್ ಪವನಶಕ್ತಿ ಹೊಂದಿದ್ದುಉತ್ಪಾದನಾ ಸಾಮರ್ಥ್ಯ ಶೇಕಡ 150ರಷ್ಟು ಬೆಳವಣಿಗೆ ದಾಖಲಿಸಿದೆ. 2030ರ ವೇಳೆಗೆ 100 ಗಿಗಾವ್ಯಾಟ್ ಪವನ ಶಕ್ತಿ ಹಾಗೂ ಇದರ ಜೊತೆಗೆ ಕಡಲ ತೀರದ ಯೋಜನೆಗಳಿಂದ 30 ಗಿಗಾವ್ಯಾಟ್ ಪವನಶಕ್ತಿ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸ್ವಾವಲಂಬಿ ಭಾರತದ ಬಲವಾದ ನೀತಿಸುಧಾರಣೆಗಳು ಮತ್ತು ದೃಢಸಂಕಲ್ಪದಿಂದಾಗಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಉತ್ತಮ ಸಾಧನೆ ಮಾಡಿದೆ. ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳು ಮುಂದುವರಿದಿದೆ. ವಿದೇಶಗಳಿಗೆ ರಫ್ತಾಗುವ ಆಪಲ್ ಮೊಬೈಲ್ ಗಳ ಪೈಕಿ ಶೇಕಡ 90ರಷ್ಟು ಮೇಕ್ ಇನ್ ಇಂಡಿಯಾ ಯೋಜನೆಯಡಿ ಭಾರತದಲ್ಲಿಯೇ ಉತ್ಪಾದನೆಯಾಗುತ್ತಿವೆ ಎಂದರು.

ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯ್ಕ್ ಮಾತನಾಡಿ, ಪವನಶಕ್ತಿ ಉತ್ಪಾದನೆಯಲ್ಲಿ ಭಾರತ ಗಣನೀಯ ಪ್ರಗತಿ ಸಾಧಿಸಿದೆ. ಸದ್ಯ 51 ಗಿಗಾವ್ಯಾಟ್ ಸಾಮರ್ಥ್ಯ ಹೊಂದಿದ್ದುವಿಶ್ವದಲ್ಲೇ 4ನೇ ಅತಿದೊಡ್ಡ ಉತ್ಪಾದನಾ ತಾಣವಾಗಿದೆ. ಪ್ರಧಾನಿ ನಾಯಕತ್ವದಲ್ಲಿ ಪವನಶಕ್ತಿ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆಕರ್ನಾಟಕ ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ರಾಜ್ಯ. ಪವನ ಶಕ್ತಿ ಉತ್ಪಾದನೆಯಲ್ಲಿ ಭಾರತ ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಇಂಧನ ಸಚಿವ ಕೆ. ಜೆ. ಚಾರ್ಜ್ಕೆಆರ್‌ಇಡಿಎಲ್ ಅಧ್ಯಕ್ಷ ಹಾಗೂ ಶಾಸಕ ಟಿ. ಡಿ.ರಾಜೇಗೌಡ ಸೇರಿ ಹಲವರು ಉಪಸ್ಥಿತರಿದ್ದರು.


Post a Comment

0Comments

Post a Comment (0)