ನಾವೀನ್ಯತೆ ಮತ್ತು ರಿಯಲ್ ವಲ್ರ್ಡ್ ಕ್ವಾಂಟಮ್ ಅಪ್ಲಿಕೇಶನ್ಸ್ ನ ಜಾಗತಿಕ ಕೇಂದ್ರವಾಗಿಸುವುದು ನಮ್ಮ ಉದ್ದೇಶ
ಕ್ವಾಂಟಮ್ ಯುಗಕ್ಕೆ ಒಟ್ಟಾಗಿ ಜಗತ್ತನ್ನು ಮುನ್ನಡೆಸಲು ಕರ್ನಾಟಕ ಹಾಗೂ ಭಾರತ ಸಿದ್ಧವಾಗಿದೆ –ಮುಖ್ಯಮಂತ್ರಿ ಸಿದ್ದರಾಮಯ್ಯವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಐಐಎಸ್ಸಿ ಕ್ವಾಂಟಮ್ ತಂತ್ರಜ್ಞಾನ ಉಪಕ್ರಮ (ಐಕ್ಯೂಟಿಐ) ಅವರಿಂದ ಬೆಂಗಳೂರಿನ ಮಾನ್ಯತಾ ಬಿಸಿನೆಸ್ ಪಾರ್ಕ್ನ ಎಂಬೆಸ್ಸಿ ದಿ ಹಿಲ್ಟನ್ನಲ್ಲಿ ಹಮ್ಮಿಕೊಳ್ಳಲಾದ ಕ್ವಾಂಟಮ್ ಇಂಡಿಯಾ ಬೆಂಗಳೂರು - 2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ನಂತರ ಉದ್ಘಾಟನಾ ಭಾಷಣ ಮಾಡಿದ ಮುಖ್ಯಮಂತ್ರಿಗಳು, ಕ್ವಾಂಟಮ್ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಕರ್ನಾಟಕದ ನಾಯಕತ್ವದ ಗುರುತಾಗಿರುವ ಅಂತರಾಷ್ಟ್ರೀಯ ಕಾರ್ಯಕ್ರಮವಾಗಿರುವ “ಕ್ವಾಂಟಮ್ ಇಂಡಿಯಾ ಬೆಂಗಳೂರು 2025” ನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದು ತಿಳಿಸಿದರು.
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಿರುವ ನೊಬೆಲ್ ಪ್ರಶಸ್ತಿ ಪುರಸ್ಕøತರು, ವಿಜ್ಞಾನಿಗಳು, ತಜ್ಞರು ಸೇರಿದಂತೆ ಭಾರತ ಮತ್ತು ಅಂತರಾಷ್ಟ್ರೀಯ ಪ್ರತಿನಿಧಿಗಳಿಗೆ ಆತ್ಮೀಯ ಸ್ವಾಗತ ಕೋರುತ್ತಾ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಐಐಎಸ್ಸಿ ಕ್ವಾಂಟಮ್ ಟೆಕ್ನಾಲಜಿ ಇನಿಷಿಯೇಟಿವ್ ಹಾಗೂ ರಾಷ್ಟ್ರೀಯ ಕ್ವಾಂಟಮ್ ಮಿಷನ್ ಸಹಯೋಗದೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮ ಭಾರತದ ಕ್ವಾಂಟಮ್ ಪಯಣದಲ್ಲಿ ಒಂದು ಮೈಲಿಗಲ್ಲು ಎಂದು ತಿಳಿಸಿದರು.
ಈ ವೇದಿಕೆಯು ನಾವೀನ್ಯತೆ ಮತ್ತು ರಿಯಲ್ ವಲ್ರ್ಡ್ ಕ್ವಾಂಟಮ್ ಅಪ್ಲಿಕೇಶನ್ಸ್ ನ ಜಾಗತಿಕ ಕೇಂದ್ರವಾಗಿಸುವುದು ನಮ್ಮ ಉದ್ದೇಶವಾಗಿದೆ. ಕ್ವಾಂಟಮ್ ಯುಗಕ್ಕೆ ಒಟ್ಟಾಗಿ ಜಗತ್ತನ್ನು ಮುನ್ನಡೆಸಲು ಕರ್ನಾಟಕ ಹಾಗೂ ಭಾರತ ಸಿದ್ಧವಾಗಿದೆ ಎಂದು ಹೆಮ್ಮೆಯಿಂದ ಇಂದು ಘೋಷಿಸುತ್ತೇನೆ ಎಂದರು.
ಐಟಿ, ಜೈವಿಕ ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ಮುಂಚಿನಿಂದಲೂ ಸಮರ್ಥ ವಾಗಿರುವ ಕರ್ನಾಟಕ, ಭಾರತದ ತಂತ್ರಜ್ಞಾನ ಮತ್ತು ನಾವಿನ್ಯತೆಯ ರಾಜಧಾನಿಯಾಗಿದೆ. “ಕ್ವಾಂಟಮ್ ಪರಿಸರ ವ್ಯವಸ್ಥೆಯ ನಿರ್ಮಾಣ: ಸಮಾಜಕ್ಕೆ ಕ್ಯುಬಿಟ್ಸ್ಸಿ” ಎಂಬ ವಿಷಯವು ಕ್ವಾಂಟಮ್ ಸಂಶೋಧನೆಯನ್ನು ಆರೋಗ್ಯ, ರಕ್ಷಣಾ, ಆರ್ಥಿಕ ಮತ್ತು ಆಡಳಿತ ವ್ಯವಸ್ಥೆಗೆ ಪರಿಹಾರಗಳನ್ನು ಕಂಡುಕೊಳ್ಳಲು ನಮಗಿರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದರು
2025ನ್ನು ಕ್ವಾಂಟಮ್ ನ ಅಂತರಾಷ್ಟ್ರೀಯ ವರ್ಷ ಎಂದು ವಿಶ್ವದಾದ್ಯಂತ ಆಚರಣೆ ಮಾಡುತ್ತಿರುವ ಹೊತ್ತಿನಲ್ಲಿ ಕರ್ನಾಟಕದ ಕ್ವಾಂಟಮ್ ವಿಷನ್ 2035 ನ್ನು ಘೋಷಿಸಲು ನನಗೆ ಹೆಮ್ಮೆ ಎನಿಸುತ್ತದೆ. 20 ಬಿಲಿಯನ್ ಡಾಲರ್ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಾಣ ಮಾಡುವ ಮೂಲಕ ಉದ್ಯೋಗ ಸೃಷ್ಟಿ, ಕೈಗಾರಿಕೆಗಳು ಹಾಗೂ ಸಮಾಜಕ್ಕೆ ಪ್ರಯೋಜನಕಾರಿಯಾದ ಸಂಶೋಧನೆಯನ್ನು ಕೈಗೊಳ್ಳುವುದು ನಮ್ಮ ಗುರಿ. ಇದನ್ನು ಸಾಧಿಸಲು, ನಾವು ಆರ್ & ಡಿ, ಕೌಶಲ್ಯ, ಮೂಲಸೌಕರ್ಯ ಮತ್ತು ಸ್ಟಾರ್ಟ್ ಅಪ್ಗಳಿಗಾಗಿ ರೂ. 1,000 ಕೋಟಿ ನಿಧಿಯನ್ನು ಮೀಸಲಿರಿಸಿ ಕರ್ನಾಟಕ ಕ್ವಾಂಟಮ್ ಮಿಷನ್ ಅನ್ನು ಪ್ರಾರಂಭಿಸುತ್ತಿದ್ದೇವೆ ಎಂದರು.
ಕ್ವಾಂಟಮ್ ತಂತ್ರಜ್ಞಾನದ ಕಾರ್ಯಪಡೆಯು ನೀತಿ ನಿರೂಪಣೆಗೆ ಮಾರ್ಗದರ್ಶನ ಮಾಡಿದರೆ, ಕ್ವಾಂಟಮ್ ಪಾರ್ಕ್ ಉತ್ಪಾದನಾ ವಲಯಗಳು ಹಾಗೂ ಕ್ಯೂ ಸಿಟಿ ನಾವಿನ್ಯತೆಯನ್ನು ಪೋಷಿಸುತ್ತವೆ. ಮಾಹಿತಿ ತಂತ್ರಜ್ಞಾನ ಬೆಂಗಳೂರನ್ನು ಜಾಗತಿಕ ನಾಯಕನನ್ನಾಗಿಸಿದಂತೆಯೇ ಕ್ವಾಂಟಮ್ ಸಮಗ್ರ ಕೇಂದ್ರವಾದ ಕ್ಯೂ- ಸಿಟಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸಲಿದೆ. ಭಾರತದ ಕ್ವಾಂಟಮ್ ಕ್ರಾಂತಿಯನ್ನು ಕರ್ನಾಟಕ ಮುನ್ನಡೆಸುವುದನ್ನು ಖಾತ್ರಿಪಡಿಸಲು ಐದು ಪ್ರಮುಖ ಸ್ತಂಭಗಳ ಮೇಲೆ ನಮ್ಮ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಕೌಶಲ್ಯಾಭಿವೃದ್ಧಿಗೆ ಒತ್ತು:20ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಕ್ವಾಂಟಮ್ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಚಯಿಸುತ್ತೇವೆ ಹಾಗೂ ಪ್ರತಿ ವರ್ಷ 150 ಪಿ ಹೆಚ್. ಡಿ ಫೆಲೋಶಿಪ್ ಗಳಿಗೆ ನೆರವು ನೀಡುತ್ತೇವೆ.
ಐಐಎಸ್ಸಿ ಸೇರಿದಂತೆ ಪ್ರತಿಷ್ಠಿತ ಸಂಶೋಧನಾ ಕೇಂದ್ರಗಳು ಹಾಗೂ ಅತ್ಯುತ್ತಮ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಗಳೊಂದಿಗೆ ಕರ್ನಾಟಕವು ಭಾರತದ ಕ್ವಾಂಟಮ್ ಕ್ರಾಂತಿಯನ್ನು ಮುನ್ನಡೆಸಲು ಅನನ್ಯ ಸ್ಥಾನವನ್ನು ಪಡೆದಿದೆ. ಇದು ಕೇವಲ ಯೋಜನೆ ಅಲ್ಲ. ಬದಲಿಗೆ ವಿಜ್ಞಾನಿಗಳು, ಉದ್ಯಮಿಗಳು ಮತ್ತು ಯುವಕರು ಅಭಿವೃದ್ಧಿಯಾಗಲು, ಏಳಿಗೆ ಹೊಂದಲು ಮತ್ತು ಕರ್ನಾಟದಿಂದ ಕ್ವಾಂಟಮ್ ನಾವೀನ್ಯತೆಗಳನ್ನು ರಫ್ತು ಮಾಡಲು ಇದೊಂದು ಆಹ್ವಾನವಾಗಿದೆ.
ಈ ಕಾರ್ಯಕ್ರಮವು ಹೊಸ ವಿಚಾರಗಳು, ಪಾಲುದಾರಿಕೆಗಳು ಮತ್ತು ಪ್ರಗತಿಗಳನ್ನು ಉತ್ತೇಜಿಸಲಿ ಹಾಗೂ ಭಾರತದ ಕ್ವಾಂಟಮ್ ಶ್ರೇಷ್ಠತೆಯ ವೇಗವನ್ನು ಇಮ್ಮಡಿಗೊಳಿಸಲಿದೆ. ಕರ್ನಾಟಕದ ಕ್ವಾಂಟಮ್ ಪರಿಸರ ವ್ಯವಸ್ಥೆಯಲ್ಲಿ ಹೂಡಿಕೆ ಮಾಡಲು ಹಾಗೂ ನಮ್ಮ ಸಂಸ್ಥೆಗಳೊಂದಿಗೆ ಸಹಯೋಗ ಬೆಳೆಸಿಕೊಳ್ಳುವಂತೆ ಉದ್ಯಮಿಗಳಿಗೆ ನಾನು ಒತ್ತಾಯಿಸುತ್ತೇನೆ ಎಂದರು.
ಕ್ವಾಂಟಮ್ ನಮ್ಮ ಭವಿಷ್ಯವಾಗಿದೆ. ವಿಜ್ಞಾನಿಗಳೇ ಮತ್ತು ವಿದ್ಯಾರ್ಥಿಗಳೇ, ಕರ್ನಾಟಕ ನಿಮ್ಮ ಆಟದ ಮೈದಾನ. ಒಟ್ಟಾಗಿ, ಭಾರತವನ್ನು ಜಾಗತಿಕ ಕ್ವಾಂಟಮ್ ಸೂಪರ್ ಪವರ್ ಆಗಿಸೋಣ ಎಂದು ತಿಳಿಸುತ್ತಾ, ಭಾರತದ ನಾವೀನ್ಯತಾ ನಗರವಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಮ್ಮೇಳನವು ಸ್ಫೂರ್ತಿದಾಯಕ ಹಾಗೂ ಫಲಪ್ರದವಾಗಲಿ ಎಂದು ಹಾರೈಸಿದರು.
ಕ್ವಾಂಟಮ್ ತಂತ್ರಜ್ಞಾನದ ಕಾರ್ಯಪಡೆಯು ನೀತಿ ನಿರೂಪಣೆಗೆ ಮಾರ್ಗದರ್ಶನ ಮಾಡಿದರೆ, ಕ್ವಾಂಟಮ್ ಪಾರ್ಕ್ ಉತ್ಪಾದನಾ ವಲಯಗಳು ಹಾಗೂ ಕ್ಯೂ ಸಿಟಿ ನಾವಿನ್ಯತೆಯನ್ನು ಪೋಷಿಸುತ್ತವೆ. ಮಾಹಿತಿ ತಂತ್ರಜ್ಞಾನ ಬೆಂಗಳೂರನ್ನು ಜಾಗತಿಕ ನಾಯಕನನ್ನಾಗಿಸಿದಂತೆಯೇ ಕ್ವಾಂಟಮ್ ಸಮಗ್ರ ಕೇಂದ್ರವಾದ ಕ್ಯೂ- ಸಿಟಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸಲಿದೆ. ಭಾರತದ ಕ್ವಾಂಟಮ್ ಕ್ರಾಂತಿಯನ್ನು ಕರ್ನಾಟಕ ಮುನ್ನಡೆಸುವುದನ್ನು ಖಾತ್ರಿಪಡಿಸಲು ಐದು ಪ್ರಮುಖ ಸ್ತಂಭಗಳ ಮೇಲೆ ನಮ್ಮ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಕೌಶಲ್ಯಾಭಿವೃದ್ಧಿಗೆ ಒತ್ತು:20ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಕ್ವಾಂಟಮ್ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಚಯಿಸುತ್ತೇವೆ ಹಾಗೂ ಪ್ರತಿ ವರ್ಷ 150 ಪಿ ಹೆಚ್. ಡಿ ಫೆಲೋಶಿಪ್ ಗಳಿಗೆ ನೆರವು ನೀಡುತ್ತೇವೆ.
ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಶ್ರೇಷ್ಠತೆ : 1000-ಕ್ಯೂಬಿಟ್ ಪೆÇ್ರಸೆಸರ್ಗಳನ್ನು ಒಳಗೊಂಡಂತೆ ಅತ್ಯಾಧುನಿಕ ಕ್ವಾಂಟಮ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಆರೋಗ್ಯ ರಕ್ಷಣೆ, ರಕ್ಷಣಾ ಮತ್ತು ಸೈಬರ್ ಭದ್ರತೆಯಲ್ಲಿ ಪ್ರಾಯೋಗಿಕವಾದ ನೈಜ-ಪ್ರಪಂಚದ ಅನ್ವಯಿಕೆಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ನಾವು ಹೊಂದಿದ್ದೇವೆ.
ಮೂಲ ಸೌಕರ್ಯ ಅಭಿವೃದ್ಧಿ :ಭಾರತದ ಪ್ರಥಮ ಕ್ವಾಂಟಮ್ ಹಾಡ್ರ್ವೇರ್ ಪಾರ್ಕ್, 4 ನಾವಿನ್ಯತಾ ವಲಯಗಳು ಹಾಗೂ ಕ್ವಾಂಟಮ್ ಘಟಕಗಳ ಸ್ಥಳಿಯ ಉತ್ಪಾದನೆಯನ್ನು ಉತ್ತೇಜಿಸಲು ಮೀಸಲಿಡಲಾದ ಫ್ಯಾಬ್ ಲೈನ್ ನ್ನು ಕರ್ನಾಟಕ ಸ್ಥಾಪಿಸಲಿದೆ.
ಉದ್ಯಮಗಳಿಗೆ ಬೆಂಬಲ :ನೂರಕ್ಕೂ ಹೆಚ್ಚು ಸ್ಟಾರ್ಟಪ್ ಗಳಿಗೆ ಪೋಷಣೆ, ನೂರಕ್ಕೂ ಹೆಚ್ಚು ಪೇಟೆಂಟ್ ಗಳನ್ನು ದಾಖಲಿಸಲು ನೆರವು ನೀಡುವುದು ಮತ್ತು ಸ್ಟಾರ್ಟ್ ಅಪ್ ಗಳ ಬೆಳವಣಿಗೆಗೆ ಸಹಾಯ ಒದಗಿಸಲು ಕ್ವಾಂಟಮ್ ವೆಂಚರ್ ಕ್ಯಾಪಿಟಲ್ ಫಂಡ್ ಅನ್ನು ಪ್ರಾರಂಭಿಸುತ್ತೇವೆ.
ಜಾಗತಿಕ ಪಾಲುದಾರಿಕೆಗಳು :ಇಂಡಿಯಾ ಕ್ವಾಂಟಮ್ ಸಮಾವೇಶ ಹಾಗೂ ಪ್ರತಿಷ್ಠಿತ ಅಂತರಾಷ್ಟ್ರೀಯ ಸಂಸ್ಥೆಗಳ ಸಹಯೋಗದಂತಹ ಕ್ರಮಗಳಿಂದಾಗಿ ನಾವು ಕರ್ನಾಟಕವನ್ನು ಜಾಗತಿಕ ಕ್ವಾಂಟಮ್ ಕೇಂದ್ರವನ್ನಾಗಿಸುತ್ತೇವೆ.
2035 ರ ವೇಳೆಗೆ 10,000 ಉನ್ನತ ಕೌಶಲ್ಯವಿರುವ ಉದ್ಯೋಗ ಸೃಷ್ಟಿ ಮತ್ತು ಕರ್ನಾಟಕವನ್ನು ಏμÁ್ಯದ ಕ್ವಾಂಟಮ್ ರಾಜಧಾನಿಯನ್ನಾಗಿ ಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಸಾಮಾನ್ಯ ನಾಗರಿಕರಿಗೆ ಕ್ವಾಂಟಮ್ ಹೇಗೆ ಪ್ರಯೋಜನಕಾರಿ ಎಂದು ಕೆಲವರು ಕೇಳಬಹುದು. ಪ್ರಾರಂಭಿಕ ಹಂತದಲ್ಲಿ ರೋಗಗಳ ಪತ್ತೆಗೆ, ಸುರಕ್ಷಿತ ಸಂವಹನ ಹಾಗೂ ಸ್ಮಾರ್ಟ್ ಕೃಷಿಯನ್ನು ಇದು ಸಾಧ್ಯವಾಗಿಸುತ್ತದೆ. ಅಲ್ಲದೆ, ರಾಷ್ಟ್ರೀಯ ಭದ್ರತೆ ಶಿಕ್ಷಣ ಮತ್ತು ಆಡಳಿತವನ್ನು ಬಲಪಡಿಸುತ್ತದೆ.
ಕ್ವಾಂಟಮ್ ಎನ್ನುವುದು ನಮಗೆ ಕೇವಲ ತಂತ್ರಜ್ಞಾನವಲ್ಲ. ಬದಲಿಗೆ ಒಳಗೊಳ್ಳುವ ಪ್ರಗತಿ, ಘನತೆ ಹಾಗೂ ಅಭಿವೃದ್ಧಿಯಾಗಿದೆ. ಕ್ವಾಂಟಮ್ ಕಂಪ್ಯೂಟರ್, cryptography ಹಾಗೂ ಸೆನ್ಸಿಂಗ್ ನಲ್ಲಿ ಜಾಗತಿಕವಾಗಿ ರಾಷ್ಟ್ರಗಳು ಸ್ಪರ್ಧೆಗೆ ಇಳಿದಿವೆ. ರಾಷ್ಟ್ರೀಯ ಕ್ವಾಂಟಮ್ ಮಿಷನ್ ಮೂಲಕ ಕರ್ನಾಟಕದ ನಾಯಕತ್ವದಲ್ಲಿ ಭಾರತವು ಮುಂದಡಿಯಿಡುತ್ತಿದೆ.
ಮೂಲ ಸೌಕರ್ಯ ಅಭಿವೃದ್ಧಿ :ಭಾರತದ ಪ್ರಥಮ ಕ್ವಾಂಟಮ್ ಹಾಡ್ರ್ವೇರ್ ಪಾರ್ಕ್, 4 ನಾವಿನ್ಯತಾ ವಲಯಗಳು ಹಾಗೂ ಕ್ವಾಂಟಮ್ ಘಟಕಗಳ ಸ್ಥಳಿಯ ಉತ್ಪಾದನೆಯನ್ನು ಉತ್ತೇಜಿಸಲು ಮೀಸಲಿಡಲಾದ ಫ್ಯಾಬ್ ಲೈನ್ ನ್ನು ಕರ್ನಾಟಕ ಸ್ಥಾಪಿಸಲಿದೆ.
ಉದ್ಯಮಗಳಿಗೆ ಬೆಂಬಲ :ನೂರಕ್ಕೂ ಹೆಚ್ಚು ಸ್ಟಾರ್ಟಪ್ ಗಳಿಗೆ ಪೋಷಣೆ, ನೂರಕ್ಕೂ ಹೆಚ್ಚು ಪೇಟೆಂಟ್ ಗಳನ್ನು ದಾಖಲಿಸಲು ನೆರವು ನೀಡುವುದು ಮತ್ತು ಸ್ಟಾರ್ಟ್ ಅಪ್ ಗಳ ಬೆಳವಣಿಗೆಗೆ ಸಹಾಯ ಒದಗಿಸಲು ಕ್ವಾಂಟಮ್ ವೆಂಚರ್ ಕ್ಯಾಪಿಟಲ್ ಫಂಡ್ ಅನ್ನು ಪ್ರಾರಂಭಿಸುತ್ತೇವೆ.
ಜಾಗತಿಕ ಪಾಲುದಾರಿಕೆಗಳು :ಇಂಡಿಯಾ ಕ್ವಾಂಟಮ್ ಸಮಾವೇಶ ಹಾಗೂ ಪ್ರತಿಷ್ಠಿತ ಅಂತರಾಷ್ಟ್ರೀಯ ಸಂಸ್ಥೆಗಳ ಸಹಯೋಗದಂತಹ ಕ್ರಮಗಳಿಂದಾಗಿ ನಾವು ಕರ್ನಾಟಕವನ್ನು ಜಾಗತಿಕ ಕ್ವಾಂಟಮ್ ಕೇಂದ್ರವನ್ನಾಗಿಸುತ್ತೇವೆ.
2035 ರ ವೇಳೆಗೆ 10,000 ಉನ್ನತ ಕೌಶಲ್ಯವಿರುವ ಉದ್ಯೋಗ ಸೃಷ್ಟಿ ಮತ್ತು ಕರ್ನಾಟಕವನ್ನು ಏμÁ್ಯದ ಕ್ವಾಂಟಮ್ ರಾಜಧಾನಿಯನ್ನಾಗಿ ಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಸಾಮಾನ್ಯ ನಾಗರಿಕರಿಗೆ ಕ್ವಾಂಟಮ್ ಹೇಗೆ ಪ್ರಯೋಜನಕಾರಿ ಎಂದು ಕೆಲವರು ಕೇಳಬಹುದು. ಪ್ರಾರಂಭಿಕ ಹಂತದಲ್ಲಿ ರೋಗಗಳ ಪತ್ತೆಗೆ, ಸುರಕ್ಷಿತ ಸಂವಹನ ಹಾಗೂ ಸ್ಮಾರ್ಟ್ ಕೃಷಿಯನ್ನು ಇದು ಸಾಧ್ಯವಾಗಿಸುತ್ತದೆ. ಅಲ್ಲದೆ, ರಾಷ್ಟ್ರೀಯ ಭದ್ರತೆ ಶಿಕ್ಷಣ ಮತ್ತು ಆಡಳಿತವನ್ನು ಬಲಪಡಿಸುತ್ತದೆ.
ಕ್ವಾಂಟಮ್ ಎನ್ನುವುದು ನಮಗೆ ಕೇವಲ ತಂತ್ರಜ್ಞಾನವಲ್ಲ. ಬದಲಿಗೆ ಒಳಗೊಳ್ಳುವ ಪ್ರಗತಿ, ಘನತೆ ಹಾಗೂ ಅಭಿವೃದ್ಧಿಯಾಗಿದೆ. ಕ್ವಾಂಟಮ್ ಕಂಪ್ಯೂಟರ್, cryptography ಹಾಗೂ ಸೆನ್ಸಿಂಗ್ ನಲ್ಲಿ ಜಾಗತಿಕವಾಗಿ ರಾಷ್ಟ್ರಗಳು ಸ್ಪರ್ಧೆಗೆ ಇಳಿದಿವೆ. ರಾಷ್ಟ್ರೀಯ ಕ್ವಾಂಟಮ್ ಮಿಷನ್ ಮೂಲಕ ಕರ್ನಾಟಕದ ನಾಯಕತ್ವದಲ್ಲಿ ಭಾರತವು ಮುಂದಡಿಯಿಡುತ್ತಿದೆ.
ಐಐಎಸ್ಸಿ ಸೇರಿದಂತೆ ಪ್ರತಿಷ್ಠಿತ ಸಂಶೋಧನಾ ಕೇಂದ್ರಗಳು ಹಾಗೂ ಅತ್ಯುತ್ತಮ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಗಳೊಂದಿಗೆ ಕರ್ನಾಟಕವು ಭಾರತದ ಕ್ವಾಂಟಮ್ ಕ್ರಾಂತಿಯನ್ನು ಮುನ್ನಡೆಸಲು ಅನನ್ಯ ಸ್ಥಾನವನ್ನು ಪಡೆದಿದೆ. ಇದು ಕೇವಲ ಯೋಜನೆ ಅಲ್ಲ. ಬದಲಿಗೆ ವಿಜ್ಞಾನಿಗಳು, ಉದ್ಯಮಿಗಳು ಮತ್ತು ಯುವಕರು ಅಭಿವೃದ್ಧಿಯಾಗಲು, ಏಳಿಗೆ ಹೊಂದಲು ಮತ್ತು ಕರ್ನಾಟದಿಂದ ಕ್ವಾಂಟಮ್ ನಾವೀನ್ಯತೆಗಳನ್ನು ರಫ್ತು ಮಾಡಲು ಇದೊಂದು ಆಹ್ವಾನವಾಗಿದೆ.
ಈ ಕಾರ್ಯಕ್ರಮವು ಹೊಸ ವಿಚಾರಗಳು, ಪಾಲುದಾರಿಕೆಗಳು ಮತ್ತು ಪ್ರಗತಿಗಳನ್ನು ಉತ್ತೇಜಿಸಲಿ ಹಾಗೂ ಭಾರತದ ಕ್ವಾಂಟಮ್ ಶ್ರೇಷ್ಠತೆಯ ವೇಗವನ್ನು ಇಮ್ಮಡಿಗೊಳಿಸಲಿದೆ. ಕರ್ನಾಟಕದ ಕ್ವಾಂಟಮ್ ಪರಿಸರ ವ್ಯವಸ್ಥೆಯಲ್ಲಿ ಹೂಡಿಕೆ ಮಾಡಲು ಹಾಗೂ ನಮ್ಮ ಸಂಸ್ಥೆಗಳೊಂದಿಗೆ ಸಹಯೋಗ ಬೆಳೆಸಿಕೊಳ್ಳುವಂತೆ ಉದ್ಯಮಿಗಳಿಗೆ ನಾನು ಒತ್ತಾಯಿಸುತ್ತೇನೆ ಎಂದರು.
ಕ್ವಾಂಟಮ್ ನಮ್ಮ ಭವಿಷ್ಯವಾಗಿದೆ. ವಿಜ್ಞಾನಿಗಳೇ ಮತ್ತು ವಿದ್ಯಾರ್ಥಿಗಳೇ, ಕರ್ನಾಟಕ ನಿಮ್ಮ ಆಟದ ಮೈದಾನ. ಒಟ್ಟಾಗಿ, ಭಾರತವನ್ನು ಜಾಗತಿಕ ಕ್ವಾಂಟಮ್ ಸೂಪರ್ ಪವರ್ ಆಗಿಸೋಣ ಎಂದು ತಿಳಿಸುತ್ತಾ, ಭಾರತದ ನಾವೀನ್ಯತಾ ನಗರವಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಮ್ಮೇಳನವು ಸ್ಫೂರ್ತಿದಾಯಕ ಹಾಗೂ ಫಲಪ್ರದವಾಗಲಿ ಎಂದು ಹಾರೈಸಿದರು.
VK DIGITAL NEWS: