ಕಂಪ್ಲಿ: 12, ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಸನ್ಮಾನಿಸಿ ಅಭಿನಂದಿಸಿದ್ದಾರೆ
ಪ್ರಸ್ತುತದ ದಿನಮಾನಗಳಲ್ಲಿ ತಮ್ಮ ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಬದುಕುತ್ತಿರುವ ಜನಗಳ ಮಧ್ಯೆ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ತಮ್ಮ ಬಾಲ್ಯದ ಜೀವನದಲ್ಲಿದ್ದ ಬಡತನದ ಕಾರಣದಿಂದ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಆಸಾಧ್ಯವಾಯಿತೆಂಬುವ ಕಾರಣದಿಂದ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಾದರೂ ಉತ್ತಮ ವಿದ್ಯಾಭ್ಯಾಸ ಮಾಡಬೇಕು, ಅಂದ ಚಂದವಾಗಿ ಕಾಣಬೇಕೆನ್ನುವ ಹಿತಾದೃಷ್ಟಿಯಿಂದ ತಮ್ಮ ಭೀಕ್ಷಾಟನೆಯಿಂದ ಬಂದ ಹಣದಲ್ಲಿ ಒಂದಿಷ್ಟೂ ಹಣವನ್ನು ಉಳಿತಾಯ ಮಾಡಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವ ಇವರ ಪರೋಪಕಾರಿ ಕಾರ್ಯವು ತೃತೀಯ ಲಿಂಗಿಗಳನ್ನು ಅಸಹ್ಯವಾಗಿ ನೋಡುತ್ತಿದ್ದ ವರ್ಗವನ್ನೆ ನಾಚಿಸುವಂತೆ ಮಾಡಿದೆ, ಮಂಗಳಮುಖಿ ಸಮುದಾಯ ಸೇರಿದಂತೆ ರಾಜ್ಯಕ್ಕೆ ಯಾಗಿದ್ದಾರೆ, ಇಂತಹ ವಿಶಿಷ್ಟ ವ್ಯಕ್ತಿ ನನ್ನ ಮೂಲ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನವರೆಂದು ಹೇಳಲು ಗರ್ವಪಡುತ್ತಾ, ಸರ್ಕಾರಿ ಶಾಲೆ ಮಕ್ಕಳ ಮೇಲಿರುವ ಪ್ರೀತಿ, ಸೇವಾ ಮನೋಭಾವನೆ, ಪರೋಪಕಾರಿ ಗುಣವನ್ನು ಮತ್ತು ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸಿ ಮೋಹನ್ ಕುಮಾರ್ ದಾನಪ್ಪನವರು ಹಾರೈಸಿದ್ದಾರೆ,