ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಜುಲೈ 07 (ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ಇಲಾಖೆಯ ನಿಯಮಾನುಸಾರ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, 2025 ರ ಜುಲೈ 15  ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.
 ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ಇಲಾಖೆಯ ವೆಬ್‍ಸೈಟ್ kannadasiri.karnataka.gov.in  ನಲ್ಲಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)