ಧರ್ಮಸ್ಥಳ ಪ್ರಕರಣದಲ್ಲಿ ಎಸ್​ಐಟಿಯಿಂದ ಪಾರದರ್ಶಕ ತನಿಖೆ: ಸಚಿವ ದಿನೇಶ್ ಗುಂಡೂರಾವ್

varthajala
0

 ಕಡಬ(ದ.ಕನ್ನಡ): "ಧರ್ಮಸ್ಥಳದ ವಿಚಾರದಲ್ಲಿ ಗಂಭೀರ ಆರೋಪ ಎದುರಾಗಿದೆ. ಇಲ್ಲಿ ಎಸ್‌ಐಟಿಯವರು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಇಲ್ಲವಾದರೆ, ಮುಂದೆ ನ್ಯಾಯಾಲಯದಲ್ಲಿ ಇದು ಪ್ರಶ್ನೆಯಾಗುತ್ತದೆ. ಆದ್ದರಿಂದ ಈ ವಿಚಾರದಲ್ಲಿ ಅನುಮಾನವೇ ಬೇಡ" ಎಂದು  ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕಡಬ ಪಟ್ಟಣ ಪಂಚಾಯತ್​​ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಕಡಬ ಅನುಗ್ರಹ ಸಭಾಭವನದಲ್ಲಿ ನಡೆದ ಕಾಂಗ್ರೆಸ್​ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

"ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಕಡಬದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷವನ್ನು ಗದ್ದುಗೆಗೆ ಏರಿಸುವುದು ಮುಂದಿನ ತಾಲೂಕು, ಜಿಲ್ಲಾ ಪಂಚಾಯತ್​ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಆ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್​ ಬಾವುಟ ಹಾರಿಸಬೇಕು. ಕಾಂಗ್ರೆಸ್​ಗೆ ದ.ಕ ಮತ್ತು ಉಡುಪಿ ಜಿಲ್ಲೆ ಸವಾಲಾಗಿದೆ. ಇಲ್ಲಿ ಜನರ ಮಧ್ಯೆ ಧರ್ಮದ ಕಂದಕವನ್ನು ಸೃಷ್ಟಿಸುತ್ತಾ, ಕೋಮು ಭಾವನೆಗಳನ್ನು ಕೆರಳಿಸಿ, ಮತ ಬ್ಯಾಂಕ್ ಮಾಡಿಕೊಂಡಿರುವ ಬಿಜೆಪಿ ಇಲ್ಲಿ ಗಟ್ಟಿನೆಲೆಯೂರಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ ಮಡಿಕೇರಿಯನ್ನು ಕಾಂಗ್ರೆಸ್​​ ಛಿದ್ರಮಾಡಿದೆ. ಮುಂದೆ ಇಲ್ಲಿನ ಸರದಿಯಾಗಲಿದೆ" ಎಂದು ಹೇಳಿದ ಸಚಿವರು, "ರಾಜ್ಯ ಸರಕಾರದ ಜನಪರ ಗ್ಯಾರಂಟಿ ಯೋಜನೆಗಳನ್ನು ಕಡಬ ಪಟ್ಟಣ ಪಂಚಾಯತ್​ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತಿಸಿ ಅಧಿಕಾರ ಪಡೆಯಬೇಕು" ಎಂದು ಕರೆ ನೀಡಿದರು.


Post a Comment

0Comments

Post a Comment (0)