ಬೆಂಗಳೂರು, ಆಗಸ್ಟ್ 21, (ಕರ್ನಾಟಕ ವಾರ್ತೆ) :
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ “ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2024”ನ್ನು ಹಿಂಪಡೆಯುವಂತೆ ಮಾನ್ಯ ಸಭಾಪತಿಗಳ ಅನುಮತಿ ಕೋರಿದರು.
ಮಾನ್ಯ ಸಭಾಪತಿಗಳು ಸದರಿ ವಿಧೇಯಕವನ್ನು ಹಿಂಪಡೆಯಲು ಅನುಮತಿ ನೀಡಿ ವಿಧೇಯಕವನ್ನು ಹಿಂಪಡೆದರು.