ಬೆಂಗಳೂರು, ಆಗಸ್ಟ್ 21 (ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಗಳೊಂದಿಗೆ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನಿಂದ ತಿರಸ್ಕøತವಾದ ರೂಪದಲ್ಲಿರುವ 2025ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಕಾರ್ಯದರ್ಶಿಯಗಳು ಮಂಡಿಸಿದರು.
2025ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ವಿಧಾನಸಭೆಯಲ್ಲಿ ಮಂಡಿಸಿದರು.