ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ

varthajala
0


 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ.

ಪ್ರಸ್ತುತ  ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಲು ಸೂಚಿಸಿದರು.
ರಾಜ್ಯದಲ್ಲಿ 33 ಡಿಸಿಆರ್‍ಇ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‍ಐಆರ್ ದಾಖಲಿಸಬೇಕು ಎಂದು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಸೂಚನೆ ನೀಡಿದರು.
ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ದೌಜ್ರ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು
ಸಭೆಯಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ, ಅಬಕಾರಿ ಇಲಾಖೆ ಸಚಿವರಾದ ಆರ್.ಬಿ.ತಿಮ್ಮಾಪುರ್, ಶಾಸಕರಾದ ಎ.ಸಿ.ಶ್ರೀನಿವಾಸ್, ಎಚ್.ವಿ.ವೆಂಕಟೇಶ್, ಸುಧಾಮ್ ದಾಸ್, ಎ.ಆರ್.ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್ ಸಿದ್ದಿ, ಬಸವರಾಜ್, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್, ರಾಜು ವೇಣುಗೋಪಾಲ ನಾಯಕ್, ಡಾ.ಉಮೇಶ್ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)