ಬೆಂಗಳೂರು, ಆಗಸ್ಟ್ 29 (ಕರ್ನಾಟಕ ವಾರ್ತೆ):
ಅಪಘಾತಗಳನ್ನು ತಪ್ಪಿಸಲು ಚಾಲಕರಿಗೆ ನಿರಂತರ ತರಬೇತಿ, ತಿಳುವಳಿಕೆ ಮತ್ತು ಜಾಗೃತ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾಗ್ಯೂ ಸಹ, ಅಗ್ಗಿಂದಾಗ್ಗೆ ಅಪಘಾತಗಳು ಸಂಭವಿಸುತ್ತಿರುವುದು ಅತ್ಯಂತ ದುಃಖಕರ, ಇದೇ ಆಗಸ್ಟ್ 28 ರಂದು ಮಧ್ಯಾಹ್ನ ತಲಪಾಡಿಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಕಲ್ಪಿಸಲಿ ಎಂದು ಸಂತಾಪ ವ್ಯಕ್ತಪಡಿಸಿರುವ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂಪಾಷ ಅವರು, ತಪ್ಪಿತಸ್ಥ ಚಾಲಕನ ಮೇಲೆ ವಿಚಾರಣೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಂದು ತಿಳಿಸಿದ್ದಾರೆ.
ಬೆಂಗಳೂರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತಿಳಿಸಿರುವಂತೆ ಆಗಸ್ಟ್ 28, 2025 ರಂದು ವಿಭಾಗದ ಮಂಗಳೂರು-1 ನೇ ಘಟಕದ ವಾಹನಸಂಖ್ಯೆ ಕೆಎ19ಎಫ್3407 ಮಾರ್ಗಸಂಖ್ಯೆ 129/130 ಕಾಸರಗೋಡು - ಮಂಗಳೂರು ಮಾರ್ಗದಲ್ಲಿ ಚಾಲಕ ನಿಜಲಿಂಗಪ್ಪ ಚಲವಾದಿ ಬಿ.ಸಂ: 309 ರವರು ಕರ್ತವ್ಯ ನಿರ್ವಹಿಸುವಾಗ ಸಮಯ ಸುಮಾರು 12.30 – 12.35 ರ ಸಮಯದಲ್ಲಿ ಕಾಸರಗೋಡು ನಿಂದ ನಿರ್ಗಮಿಸಿ ಸಮಯ 13-45 ಕ್ಕೆ ತಲಪಾಡಿ ಟೋಲ್ ಗಿಂತ 150 ಮೀಟರ್ ಹಿಂದೆ ನಿಗಮದ ಚಾಲಕರು ತಮ್ಮ ವಾಹನವನ್ನು ಅತೀವೇಗವಾಗಿ ಚಾಲನೆ ಮಾಡಿಕೊಂಡುಬರುವ ಸಮಯದಲ್ಲಿ ಏಕಾಏಕಿ ರಸ್ತೆಗೆ ಅಡ್ಡ ಬಂದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನದ ಬ್ರೇಕ್ ಹಾಕಿದ್ದು, ಅಷ್ಟರಲ್ಲಿ ನಿಗಮದ ವಾಹನ ಆಟೋಗೆ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ನಿಗಮದ ವಾಹನವು ಡಿಕ್ಕಿಯಾಗಿ ಹಠಾತ್ತನೆ ಸ್ಜೀಡ್ ಆಗಿ ತಿರುಗಿ ನಿಂತಿದೆ. ಚಾಲಕ ಚಾಲನಾ ಸೀಟಿನಿಂದ ಓಡಿ ಹೋಗಿದ್ದು, ವಾಹನವು ಇಳಿಜಾರು ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಅಟೋ ಮತ್ತು ಬಸ್ಸಿಗೆ ಕಾಯುತ್ತಿದ್ದ ಪ್ರಯಾಣಿಕರಿಗೆ ಡಿಕ್ಕಿಯಾಗಿ ನಿಂತಿರುತ್ತದೆ.
ಸದರಿ ಅಪಘಾತದಲ್ಲಿ ಮುಂದಿನಿಂದ ಡಿಕ್ಕಿ ಹೊಡೆದ ಅಟೋದಲ್ಲಿ 2 ಜನ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಇನ್ನುಳಿದ ಆಟೋ ಚಾಲಕ ಸೇರಿ 4 ಜನ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ ವೇಳೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಹಿಂಬದಿಯಿಂದ ಡಿಕ್ಕಿಯಾಗಿದ್ದ 2 ಜನ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ.
ಸದರಿ ವಾಹನವನ್ನು 2025ನೇ ಆಗಸ್ಟ್ 27 ರಂದು ಮಾರ್ಗಸಂಖ್ಯೆಗೆ ನಿಯೋಜಿಸಿದ್ದು, ಅಪಘಾತ ಸಮಯದವರೆಗೆ 10 ಸುತ್ತುವಳಿಯಲ್ಲಿ ಒಟ್ಟಾರೆ 540ಕಿಮೀ ಕ್ರಮಿಸಿರುತ್ತದೆ. ಅಲ್ಲದೇ ಈ ವಾಹನವು 2025ನೇ ಆಗಸ್ಟ್ 26 ರಂದು ಎಫ್ಸಿ ನವೀಕರಣ ಆಗಿ ಬಂದಿದ್ದು, ಯಾವುದೇ ತಾಂತ್ರಿಕ ದೋಷ ಸಂಭವಿಸಲು ಸಾಧ್ಯವಿರುವುದಿಲ್ಲ.
ಅಲ್ಲದೇ ವಾಹನ ಚಾಲಕ ಸುಮಾರು 14 ವರ್ಷಗಳಿಂದ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸದರಿ ಮಾರ್ಗದಲ್ಲಿಯೇ ಸುಮಾರು 03 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಚಾಲಕರ ಅತಿಯಾದ ವೇಗ ಮತ್ತು ಅಜಾಗರೂಕತೆ ಈ ಅಪಘಾತಕ್ಕೆ ಕಾರಣವಾಗಿದೆ. ಗಾಯಗೊಂಡ ಇತರೆ ಸಾರ್ವಜನಿಕರ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ. ನಿಗಮವು ಈ ಅಪಘಾತಕ್ಕೆ ತೀವ್ರ ವಿμÁದವನ್ನು ವ್ಯಕ್ತಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.