ಇಂದು ಆನೇಕಲ್ ತಾಲ್ಲೂಕಿನ ರಾಮಕೃಷ್ಣಪುರದಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆರ್.ಕೆ.ಶಾಲೆಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬ್ಯೂರೊ ಆಫ್ ಎನರ್ಜಿ ಎಘಿಷಿಎನ್ಸಿ (ಬಿ.ಇ.ಇ.) ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆ.ಆರ್.ಇ.ಡಿ.ಎಲ್) ಇವರ ಸಂಯುಕ್ತಾಶ್ರಯದಲ್ಲಿ
ಆಯೋಜಿಸಲಾಗಿದ್ದ “ಬಿಇಇ ಸ್ಟಾರ್ ಲೇಬಲ್ ವುಳ್ಳ ಇಂಧನ ದಕ್ಷ ಪಂಪಸೆಟ್ ಬಳಕೆ ಮತ್ತು ಜಲ ಸಂರಕ್ಷಣೆ ಜಾಗೃತಿ ಕುರಿತು” ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಮತ್ತು ರೈತರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಸುಮಂಗಲ, ಬಿ.ಇ.ಇ ಸ್ಟೋನ್ ಸೋಲಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ನವೀನ್ ಡಿ.ಆರ್, ಎಸ್ಕಾರ್ಟ್ ಸಂಸ್ಥೆಯ ಹಿರಿಯ ವಿಜ್ಞಾನಿ ಪ್ರೇಮಾ ಜಿ. ನೆಟಫಿಮ್ ಸಂಸ್ಥೆಯ ಬೇಸಾಯಶಾಸ್ತ್ರಜ್ಞರಾದ ಅಂಜನಪ್ಪ, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಮತ್ತು ರೈತರು ಭಾಗವಹಿಸಿದ್ದರು.
VK DIGTAL NEWS:ಮಹಾ ಮಹಿಮರು ಶ್ರೀ ರಾಘವೇಂದ್ರ ತೀರ್ಥರು