ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

varthajala
0

 

ಬೆಂಗಳೂರು: ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ) : ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ  2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ / ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ - ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ  ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ  ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

 ಕಾರ್ಯಕ್ರಮದ  ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ  ಆದೇಶಗಳ ಬಗ್ಗೆ ಮಾಹಿತಿಗಾಗಿ  ವೆಬ್‍ ಸೈಟ್  https://bcwd.karnataka.gov.in  ಗೆ ಭೇಟಿ ನೀಡಬಹುದು. ಇಲಾಖೆಯ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005, ಇ-ಮೇಲ್  bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್  postmatrichelp@karnatak.gov.in  ಅಥವಾ  ಉಪ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿವಿ ಟವರ್, ಅಂಬೇಡ್ಕರ್  ವೀದಿ ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Post a Comment

0Comments

Post a Comment (0)