ಬೆಂಗಳೂರು, ಆಗಸ್ಟ್ 25 (ಕರ್ನಾಟಕ ವಾರ್ತೆ): ಕರ್ನಾಟಕ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾಗಿ ಮೊಹಮ್ಮದ್ ತಬ್ರೆಜ್ ಅಲಂ ಶರೀಫ್ ಅವರು ಅಧಿಕಾರ ವಹಿಸಿಕೊಂಡಿರುತ್ತಾರೆ. ಸಾರ್ವಜನಿಕರು ಮತ್ತು ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿ ಕೆಲಸಗಳಿಗಾಗಿ, ಶ್ರೀಯುತರನ್ನು ಕರ್ನಾಟಕ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಕಚೇರಿ, “ವನ ವಿಕಾಸ” ಕಟ್ಟಡ ಮಲ್ಲೇಶ್ವರಂ 18 ನೇ ಅಡ್ಡರಸ್ತೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ
Post a Comment
0Comments