ಪರಿಷತ್‍ನಲ್ಲಿ ಕಾಗದ ಪತ್ರಗಳ ಮಂಡನೆ

varthajala
0

 ಬೆಂಗಳೂರು, ಆಗಸ್ಟ್ 19, (ಕರ್ನಾಟಕ ವಾರ್ತೆ):


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮಾರ್ಚ್ 2023-2024ಕ್ಕೆ ಕೊನೆಗೊಂಡ ವರ್ಷಕ್ಕೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ರಾಜ್ಯದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ (2025ರ ವರದಿ ಸಂಖ್ಯೆ-4) ಯನ್ನು ಸಭೆಯ ಮುಂದೆ ಮಂಡಿಸಿದರು.

ಅದೇ ರೀತಿ ಮಾರ್ಚ್ 2023ಕ್ಕೆ ಕೊನೆಗೊಂಡ ವರ್ಷಕ್ಕೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ರಾಜ್ಯ ಕಂದಾಯದ ವರದಿ (2025ನೇ ವರ್ಷದ ವರದಿ ಸಂಖ್ಯೆ-5) ಯನ್ನು ಸಭೆಯ ಮುಂದೆ ಮಂಡಿಸಿದರು.

2020-2022ನೇ ಸಾಲಿನ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮೇಲಿನ ಸಂಯೋಜಿತ ವಾರ್ಷಿಕ ತಾಂತ್ರಿಕ ಪರಿಶೀಲನಾ ವರದಿಯನ್ನು ಸಭೆಯ ಮುಂದೆ ಮಂಡಿಸಿದರು.

ಮಾರ್ಚ್ 2023ಕ್ಕೆ ಕೊನೆಗೊಂಡ ವರ್ಷಕ್ಕೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ಅನುಸರಣಾ ಲೆಕ್ಕಪರಿಶೋಧನೆ ವರದಿ (2025ನೇ ವರ್ಷದ ವರದಿ ಸಂಖ್ಯೆ-3) ಯನ್ನು ಸಭೆಯ ಮುಂದೆ ಮಂಡಿಸಿದರು.

Post a Comment

0Comments

Post a Comment (0)