ಬೆಂಗಳೂರು ಅಕ್ಟೋಬರ್ 08 (ಕರ್ನಾಟಕ ವಾರ್ತೆ): ರಾಜ್ಯದ 15 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ “ನೀರಿದ್ದರೆ ನಾಳೆ” ಯೋಜನೆಯನ್ನು ಮೊದಲ ಹಂತದಲ್ಲಿ ಅನುμÁ್ಠನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.
ಇಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದರು.
ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಶಿಷ್ಟ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿಗಳಾದ ಬಿ.ಕೆ ಪವಿತ್ರ ಅವರು ಉಪಸ್ಥಿತರಿದ್ದರು.