ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ ಮತ್ತು ಯು.ಟಿ.ಖಾದರ್

varthajala
0

ಬೆಂಗಳೂರು, ಅಕ್ಟೋಬರ್ 13, (ಕರ್ನಾಟಕ ವಾರ್ತೆ):

68ನೇ ಅಂತರರಾಷ್ಟ್ರೀಯ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‍ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು.

ಬಾರ್ಬಡೋಸ್ ಸಂಸತ್ತಿನ ಸಭಾಧ್ಯಕ್ಷರ ಪೀಠವು ಭಾರತದಿಂದ ಕೊಡಲ್ಪಟ್ಟಿದೆ. ಇದು ಭಾರತ ಮತ್ತು ಬಾರ್ಬಡೋಸ್ ನಡುವಿನ ಸ್ನೇಹ ಮತ್ತು ಸಂಸತ್ತೀಯ ಸಹಕಾರದ ಸಂಕೇತವಾಗಿದೆ.

ಈ ಸಮ್ಮೇಳನವು ಬಾರ್ಬಡೋಸ್ ಶಾಸನಾಂಗದ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಅಂತರ-ಸಂಸದೀಯ ಸಂಬಂಧಗಳನ್ನು ಬಲಪಡಿಸಲು ಮಹತ್ವದ ಅವಕಾಶವನ್ನು ಒದಗಿಸಿತು.

Post a Comment

0Comments

Post a Comment (0)