ಬೆಂಗಳೂರು, ಅಕ್ಟೋಬರ್ 18, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಬೀಜ ನಿಗಮದ ನೂತನ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಎಂ.ಆಂಜನಪ್ಪ ಅವರು ಅಕ್ಟೋಬರ್ 17 ರಂದು ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್ ಕೆ.ಜಿ., ಚಿಕ್ಕಬಳ್ಳಾಪುರ ನಗರ ಪ್ರಾಧಿಕಾರದ ಅಧ್ಯಕ್ಷರಾದ ಕೇಶವರೆಡ್ಡಿ ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.