ನಶಾಮುಕ್ತ ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್

varthajala
0

 ಗದಗ, ಅಕ್ಟೋಬರ್ 11,2025: ನಮ್ಮ ಜಿಲ್ಲೆಯನ್ನು ನಶಾಮುಕ್ತ ಗದಗ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲ ಪಣ ತೊಡಬೇಕಿದೆ. ರಾಜ್ಯಾದ್ಯಂತ ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಯತ್ನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕಾನೂನು ಹಾಗೂ ಸಂಸದಿಯ ವ್ಯವಹಾರ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದರು.

ಶನಿವಾರ ಗದಗಿನ ಕೆಎಚ್ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಅದರ ಅಂಗ ಸಂಸ್ಥೆಗಳಾದ ಗದಗ ಜಿಲ್ಲೆಯ ಮೆಡಿಕಲ್ಫಾರ್ಮಸಿನರ್ಸಿಂಗ್ಆಯುರ್ವೇದ ಸಂಸ್ಥೆಗಳ ಸಹಯೋಗದಲ್ಲಿ  ಹಮ್ಮಿಕೊಳ್ಳಲಾಗಿದ್ದ ಅಂಗಾಂಗದಾನ ಮತ್ತು ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.



ಶೇ 10ರಷ್ಟು ಯುವ ಜನಾಂಗ ನಶೆಯ ಕಪಿಮುಷ್ಟಿಯಲ್ಲಿ ಸಿಲುಕಿರುವುದು ಕಳವಳಕಾರಿಇದು ಒಬ್ಬ ವಿದ್ಯಾರ್ಥಿಯನ್ನು ಮಾತ್ರವಲ್ಲಅವನ ಕುಟುಂಬಸಮಾಜ ಹಾಗೂ ಇಡೀ ದೇಶವನ್ನೇ ಸಂಕಷ್ಟಕ್ಕೆ ದೂಡುವಂತಹ ಸಂಗತಿಶಿಕ್ಷಣ ಸಂಸ್ಥೆಗಳುಕುಟುಂಬಗಳುಶಿಕ್ಷಕರುಪೋಷಕರು ಹಾಗೂ ವಿದ್ಯಾರ್ಥಿಗಳು ಇದರ ವಿರುದ್ಧ ಹೋರಾಡಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು

ಇಂದು ಇಲ್ಲಿ ನೆರೆದಿರುವಂತಹ ಎಲ್ಲ ವಿದ್ಯಾರ್ಥಿಗಳುಯುವ ಜನರುಪೋಷಕರು ಹಾಗೂ ಅಧ್ಯಾಪಕ ವರ್ಗದವರು ‘ನಾನು ನಶೆಯ ಗುಲಾಮನಾಗುವುದಿಲ್ಲ’ ಎಂದು ಪ್ರತಿಜ್ಞೆ ಕೈಗೊಳ್ಳಬೇಕುಹಾಗೆಯೇ ಸ್ನೇಹಿತರನ್ನುಬಂಧುಗಳನ್ನು ನಶೆಯ ಜಗತ್ತಿಗೆ ಪ್ರವೇಶಿಸದಂತೆ ತಡೆಯಬೇಕುದುಶ್ಚಟಗಳ ಬಳಿ ಸಾರದಂತೆ ಸ್ನೇಹಿತರನ್ನು ತಡೆಯುವುದು ಅಥವಾ ದುಶ್ಚಟಗಳಿಂದ ಅವರನ್ನು ಮುಕ್ತಗೊಳಿಸುವುದು ಸ್ನೇಹಿತರಿಗೆ ನೀವು ಕೊಡುವ ಬಹುದೊಡ್ಡ ಉಡುಗೊರೆ ಎಂದು ಕಿವಿಮಾತು ಹೇಳಿದರು.

ಅಂಗಾಂಗದಾನ ಗದಗ ಜಿಲ್ಲೆಗೆ 4ನೇ ಸ್ಥಾನ

ಅಂಗಾಂಗ ದಾನದಲ್ಲಿ ಗದಗ ಜಿಲ್ಲೆ 4ನೇ ಸ್ಥಾನದಲ್ಲಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ. 20ನೇ ಸ್ಥಾನದಲ್ಲಿದ್ದ ಗದಗ 4ನೇ ಸ್ಥಾನಕ್ಕೆ ಹೋಗಲು ಪ್ರತಿಯೊಬ್ಬರ ಒಟ್ಟು ಪ್ರಯತ್ನ ಕಾರಣವಾಗಿದೆಅಂಗಾಂಗ ದಾನದ ಬಗ್ಗೆ ಗದಗ ಜಿಲ್ಲೆಯಲ್ಲಿ ಚಳುವಳಿಯ ರೂಪದ ಜಾಗೃತಿಯನ್ನು ಮೂಡಿಸಿದ ಕೀರ್ತಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆಕುಲಪತಿಗಳಾದ ಡಾಬಿ.ಸಿಭಗವಾನ್ ಅವರಿಗೆ ಗದಗಿನ ಮೇಲೆ ಹೆಚ್ಚು ಪ್ರೀತಿ.  ಗದಗ ಜಿಲ್ಲೆಯನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆಯುತ್ತೇವೆಗದಗ ಜಿಲ್ಲೆಗೂ ಸಹಕಾರಿ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆಗದಗ ಜಿಲ್ಲೆಯ ಸಹಕಾರ ಕ್ಷೇತ್ರದ ಚಳುವಳಿಯಲ್ಲಿ ನಮ್ಮ ತಂದೆ ಕೆ.ಎಚ್ಪಾಟೀಲ್ ಹಾಗೂ ಬಿ.ಎಸ್ವಿಶ್ವನಾಥ್ ಅವರ ಹೆಸರು ಮುಂಚೂಣಿಯಲ್ಲಿವೆಕುಲಪತಿಗಳಾದ ಬಿ.ಸಿಭಗವಾನ್ ಅವರು ವಿ.ಎಸ್ವಿಶ್ವನಾಥ್ ಅವರ ಅಳಿಯ ನಂಟೇ ಅವರನ್ನು ಗದಗ ಜಿಲ್ಲೆಯ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಲು ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಸ್ವಸ್ಥ ಸಮಾಜ ನಿರ್ಮಾಣ ನಮ್ಮೆಲ್ಲರ ಆದ್ಯತೆ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾಬಿ.ಸಿ.ಭಗವಾನ್ ಮಾತನಾಡಿ, ‘ಸ್ವಸ್ಥ ಸಮಾಜ ನಿರ್ಮಾಣ ನಮ್ಮೆಲ್ಲರ ಆದ್ಯತೆಯಾಗಬೇಕು.. ಹೀಗಾಗಿ ಯುವಕರನ್ನು ಆರೋಗ್ಯಪೂರ್ಣ ಜೀವನದತ್ತ ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದರು.

ವಿದ್ಯಾರ್ಥಿಗಳನ್ನು ಹಾಗೂ ವೈದ್ಯಕೀಯ ವೃತ್ತಿಪರರನ್ನು ಆರೋಗ್ಯವಂತ ಯುವಕರು ಮಾತ್ರ ಸ್ವಸ್ಥ ಸಮಾಜವನ್ನು ಕಟ್ಟಬಲ್ಲರು ಗಮನದಲ್ಲಿ ಇಟ್ಟುಕೊಂಡು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯವು ನಶಾಮುಕ್ತ ಭಾರತ ಹಾಗೂ ಅಂಗಾಂಗ ದಾನ ಸೇರಿದಂತೆ ಹಲವಾರು ಅಭಿಯಾನಗಳನ್ನು ರಾಜ್ಯವ್ಯಾಪಿಯಾಗಿ ಹಮ್ಮಿಕೊಳ್ಳಲು ಮುಂದಾಗಿದೆ ಪ್ರಯತ್ನವನ್ನು ಗದಗ ಜಿಲ್ಲೆಯಿಂದ ಆರಂಭಿಸುತ್ತಿರುವುದು ಸಂತಸ ತಂದಿದೆ ಎಂದರು.

ದೇಶದ ಭವಿಷ್ಯವನ್ನು ನಿರ್ಧರಿಸುವ ಯುವಕರನ್ನು ನಶೆಯ ಹಿಡಿತದಿಂದ ಆಚೆ ತಂದರೆ ದೇಶದ ಅಭಿವೃದ್ಧಿ ನಿಶ್ಚಯವಾಗಿ ಆಗುತ್ತದೆ ನಿಟ್ಟಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ಧ್ಯೇಯೋದ್ದೇಶವನ್ನು ಹೊಂದಿದೆ ಎಂದರು.

ದೇಶದಲ್ಲಿ ಕಳೆದ ವರ್ಷ ಸುಮಾರು 17ರಿಂದ 18 ಸಾವಿರ ಅಂಗಾಂಗ ಕಸಿ ಮಾಡಲಾಗಿದೆಆದರೆಅಂಗಾಂಗ ಕಸಿಗಾಗಿ ಕಾಯುತ್ತಿರುವ ರೋಗಿಗಳ ಸಂಖ್ಯೆ 2ಲಕ್ಷಕ್ಕೂ ಅಧಿಕಹೆಚ್ಚು ಹೆಚ್ಚು ಜನರು ಅಂಗಾಂಗ ದಾನ ಮಾಡಲು ಮುಂದೆ ಬರಬೇಕುಅದಕ್ಕೆ ನಾವು ಪ್ರೇರಣೆಯಾಗಬೇಕು ಎನ್ನುವುದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶಯವಾಗಿದೆಎಲ್ಲರೂ  ಬಗ್ಗೆ ಮಾಹಿತಿ ತಿಳಿದುಕೊಂಡುತಮ್ಮವರಲ್ಲಿಯೂ ಜಾಗೃತಿ ಮೂಡಿಸಬೇಕುಸ್ನೇಹಿತರುಬಂಧುಗಳುಕುಟುಂಬ ಹಾಗೂ ಪರಿಚಿತರನ್ನು ಅಂಗಾಂಗ ದಾನಕ್ಕೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಹಾಲ್ಟ್ ಸಾಲ್ಟ್ ಅಭಿಯಾನ:

ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆಗೆ ಕಡಿವಾಣ ಹಾಕಲು ’ಹಾಲ್ಟ್ ಸಾಲ್ಟ್’ ಅಭಿಯಾನವನ್ನು ಕೈಗೊಳ್ಳಲಾಗಿದೆಉಪ್ಪಿನ ಬಳಕೆಯನ್ನು ಕಡಿಮೆ ಮಾಡಲು ಪ್ರೇರೇಪಿಸುವುದು  ಅಭಿಯಾನದ ಉದ್ದೇಶನಾವು ಪ್ರತಿದಿನ ಶೇ 5ರಷ್ಟು ಉಪ್ಪನ್ನು ಬಳಸಬೇಕು ಎನ್ನುವ ಎಚ್ಚರಿಕೆಯನ್ನು ಮೀರಿ ಶೇ 20ರಿಂದ 30ರಷ್ಟು ಹೆಚ್ಚು ಪ್ರಮಾಣದ ಉಪ್ಪನ್ನು ಆಹಾರದಲ್ಲಿ ಬಳಸುತ್ತೇವೆಇದರಿಂದ ಜನರಲ್ಲಿಅದರಲ್ಲೂ ಮುಖ್ಯವಾಗಿ ಯುವಸಮುದಾಯದಲ್ಲಿ ಬ್ರೇನ್ ಸ್ಟ್ರೋಕ್ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಅಧಿಕರಕ್ತದೊತ್ತಡದಂತಹ ಜೀವನ ಶೈಲಿ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಮಾಹಿತಿ ನೀಡಿದರು.

ಕೆ.ಎಚ್.ಪಾಟೀಲ ಕ್ರೀಡಾಂಗಣದಿಂದ ಆರಂಭವಾದ ವಾಕ್ ಥಾನ್ ಗಾಂಧಿ ಸರ್ಕಲ್ ಮೂಲಕ ಹಳೇ ಡಿ.ಸಿ ಕಚೇರಿ ಸರ್ಕಲ್ ವರೆಗೆ ಸಾಗಿತು.

 

ವಿಧಾನ ಪರಿಷತ್ ಸದಸ್ಯರಾದ ಎಸ್ವಿಸಂಕನೂರ ಮತ್ತು ಕೆ.ಎಚ್ಪಾಟೀಲ್ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಿರ್ದೇಶಕ ಡಾಬಸವರಾಜ ಬೊಮ್ಮನಹಳ್ಳಿಎಚ್ಕೆಪಾಟೀಲ್ ಸೇವಾ ತಂಡದ ಅಧ್ಯಕ್ಷರಾದ ಪ್ರಭು ಎಲ್ಬುರಬುರೆ ,ಗದಗ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾಎಸ್ಎಸ್ನೀಲಗುಂದ , ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾಕಿರಣ ಕುಳಗೇರಿಡಾಜೀವನ್ನವರ್ಸೆನೆಟ್ ಸದಸ್ಯರಾದ ಡಾವಿರೇಶ ಹಂಚಿನಾಳಡಾಜಗದೀಶ ಕೋನರೆಡ್ಡಿಡಾಸಂಕನಗೌಡ ಪಾಟೀಲ್ಡಾಸಂತೋಷ ಇಂಡಿ ಹಾಜರಿದ್ದರುಗದಗ ಜಿಲ್ಲೆಯ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳುಅದ್ಯಾಪಕರು ಹಾಗೂ ಸಿಬ್ಬಂದಿ ಜಾಥಾದಲ್ಲಿ ಭಾಗವಹಿಸಿದ್ದರು.


Post a Comment

0Comments

Post a Comment (0)