ಅದೇ ರೀತಿ ಸುವರ್ಣ ವಿಧಾನಸೌಧದಲ್ಲಿ ಸೂಕ್ತ ಭದ್ರತೆ ಹಾಗೂ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಅಧಿವೇಶನ ಸಂದರ್ಭದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಸಭಾಧ್ಯಕ್ಷರಾದ ಖಾದರ್ ಫರೀದ್ ಸೂಚಿಸಿದರು.
ಕಳೆದ ಬಾರಿಯಂತೆ ಈ ಬಾರಿಯೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸುವರ್ಣ ವಿಧಾನಸೌಧದ ಆವರಣದಲ್ಲಿ ಕಳೆದ ಬಾರಿ ಶಾಸಕರುಗಳು ಸಸಿಗಳನ್ನು ನೆಟ್ಟಿದ್ದು, ಈ ಬಾರಿಯೂ ಪ್ರತಿ ಶಾಸಕರುಗಳಿಂದ ಸಸಿಗಳನ್ನು ನೆಡಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.
ಅಧಿವೇಶನಕ್ಕೆ ಸಂಬಂಧಿಸಿದಂತೆ ವಿತರಿಸಲಾಗುವ ಪಾಸ್ಗಳಲ್ಲಿ ಯಾವುದೇ ಗೊಂದಲಗಳಾಗದಂತೆ ನಿರ್ವಹಿಸಬೇಕು. ಪಾಸ್ ವಿತರಣೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕಲಾಪಗಳ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಕಲಾಪಗಳ ವೀಕ್ಷಣೆಗೆ ಸೂಕ್ತ ಸಮಯವನ್ನು ನಿಗದಿಪಡಿಸಬೇಕು.
ವಿಧಾನ ಮಂಡಲದ ಕಾರ್ಯಕಲಾಪಗಳ ವೀಕ್ಷಣೆಗೆ ಆಗಮಿಸುವ ಶಾಲಾ, ಕಾಲೇಜು ವಿದ್ಯಾರ್ಥಿಗಳ ಜೊತೆಗೆ ಪೌರ ಕಾರ್ಮಿಕÀರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಮಹಿಳೆಯರಿಗಾಗಿ ಅವಕಾಶ ಕಲ್ಪಿಸಲು ಚಿಂತಿಸಲಾಗಿದ್ದು ಈ ಕುರಿತು ಅಗತ್ಯದ ವ್ಯವಸ್ಥೆ ಮಾಡಲು ತಿಳಿಸಿದರು.
ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರುಗಳಿಗೆ, ಸಚಿವಾಲಯದ ಅಧಿಕಾರಿ, ಸಿಬ್ಬಂದಿ ಹಾಗೂ ಮಾರ್ಷಲ್ಗಳಿಗೆ ಸೂಕ್ತ ಸಾರಿಗೆ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಬೇಕು.
ಅಧಿವೇಶನ ಸಂದರ್ಭದಲ್ಲಿ ಸಚಿವರು, ಶಾಸಕರು ತಂಗುವ ಹೋಟೆಲ್ಗಳಲ್ಲಿ ತಜ್ಞ ವೈದ್ಯರ ತಂಡವನ್ನು ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ ಸೌಧದಲ್ಲಿಯೂ ಸಹ ವೈದ್ಯರ ತಂಡವನ್ನು ಸುಸಜ್ಜಿತ ಅಂಬ್ಯಲೆನ್ಸ್ ನೊಂದಿಗೆ ನಿಯೋಜಿಸಲು ತಿಳಿಸಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಅಕ್ಕಮಹಾದೇವಿ ವಿಶ್ವ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಯ್ದ 30 ವಿದ್ಯಾರ್ಥಿಗಳ ತಂಡಕ್ಕೆ ವಿಧಾನ ಮಂಡಲದ ಕಾರ್ಯ ಕಲಾಪಗಳ ಮಾಹಿತಿ ಪಡೆಯಲು ಅನುಕೂಲವಾಗುವಂತೆ ವೀಕ್ಷಣೆಗೆ ಹೆಚ್ಚಿನ ಸಮಯ ನಿಗದಿಪಡಿಸಲಾಗುವುದು. ಅದರ ಪ್ರಕಾರ ಅವರಿಗೆ ಅವಕಾಶವನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿ, ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪೂರ್ವ ತಯಾರಿ ಕುರಿತು ವಿವರಿಸಿದರು.
ಪ್ರಸಕ್ತ ಬೆಳಗಾವಿ ಚಳಿಗಾಲ ಅಧಿವೇಶನ ಯಶಸ್ವಿಗಾಗಿ ಕಳೆದ ಸಾಲಿನಂತೆಯೇ ಈ ಬಾರಿಯೂ ಹನ್ನೆರೆಡು ಸಮಿತಿಗಳನ್ನು ರಚಿಸಿದ್ದು, ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ ಅವರು ಮಾತನಾಡಿ, ಅಧಿವೇಶನದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸೂಕ್ತ ಪೊಲೀಸ್ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೊಲೀಸ್ ಭದ್ರತೆಗೆ ಸಂಬಂಧಿಸಿದಂತೆ ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಅಧಿವೇಶನಕ್ಕೆ ನಿಯೋಜಿಸಲಾಗುತ್ತಿದೆ. ಅಧಿವೇಶನ ಸಂದರ್ಭದಲ್ಲಿ ನಿಯೋಜಿತ ಪೊಲೀಸ್ ಸಿಬ್ಬಂದಿ ಅಧಿಕಾರಿಗಳಿಗಾಗಿ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿಧಾನ ಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ರಾಜು (ಆಸೀಫ್) ಸೇಠ, ವಿಧಾನಸಭೆ ಕಾರ್ಯದರ್ಶಿಗಳಾದ ಎಂ.ಕೆ. ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷ್ಮೀ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
ತದನಂತರ ವಿಧಾನಸಭೆ, ವಿಧಾನಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್ ಮತ್ತಿತರ ಸ್ಥಳಗಳನ್ನು ವಿಧಾನ ಸಭಾಧ್ಯಕ್ಷರು, ಸಭಾಪತಿಯವರು ಪರಿಶೀಲಿಸಿ, ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.