ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಹಾಗೂ ಹುಣ್ಣಿಮೆಯ ಪ್ರಯುಕ್ತ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ ಸೇವೆ ಹಾಗೂ ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ತೊಟ್ಟಿಲು ಸೇವೆ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಡಾ|| ರಶ್ಮಿ ವಿಜಯ್ ಅವರ ನಿರ್ದೇಶನದಲ್ಲಿ ಎಸ್.ಎಸ್.ಎನ್.ಕೆ. ಅಕಾಡೆಮಿಯ ಸುಮಾರು 30 ಮಕ್ಕಳು ನಡೆಸಿಕೊಟ್ಟ ಭರತನಾಟ್ಯ ಪ್ರದರ್ಶನ ತುಂಬಾ ಆಕರ್ಷಣೀಯವಾಗಿತ್ತು..
ಈ ಎಲ್ಲಾ ಕಾರ್ಯಕ್ರಮಗಳೂ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
