ಬೆಳಗಾವಿ / ಬೆಂಗಳೂರು, ಡಿಸೆಂಬರ್ 08, (ಕರ್ನಾಟಕ ವಾರ್ತೆ) :ವಿಧಾನಸಭಾ ಅಧಿವೇಶನದ ಮೊದಲ ದಿನವಾದ ಇಂದು ವಿಧಾನ ಪರಿಷತ್ನಲ್ಲಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಕೆ. ನರಹರಿ, ವಿಧಾನ ಪರಿಷತ್ತಿನ ಹಾಗೂ ವಿಧಾನ ಸಭೆಯ ಮಾಜಿ ಸದಸ್ಯರಾಗಿದ್ದ ಆರ್.ವಿ. ದೇವರಾಜ್, ಮಾಜಿ ಲೋಕಸಭಾ ಸದಸ್ಯರು, ಮಾಜಿ ಸಚಿವರು ಹಾಗೂ ವಿಧಾನ ಸಭೆ ಹಾಲಿ ಸದಸ್ಯರಾಗಿದ್ದ ಹುಲ್ಲಪ್ಪ ಯಮನಪ್ಪ ಮೇಟಿ, ಖ್ಯಾತ ಜಾನಪದ ತಜ್ಞ ಹಾಗೂ ಸಾಹಿತಿಯಾಗಿದ್ದ ಡಾ: ಎನ್.ಆರ್. ನಾಯಕ, ಖ್ಯಾತ ಕಾದಂಬರಿಕಾರರಾಗಿದ್ದ ಎಸ್.ಎಲ್. ಭೈರಪ್ಪ, ಹಿರಿಯ ಪತ್ರಕರ್ತರಾಗಿದ್ದ ಟಿ.ಜೆ.ಎಸ್. ಜಾರ್ಜ್, ಪ್ರಸಿದ್ಧ ಸುಗಮ ಸಂಗೀತ ಗಾಯಕಿಯಾಗಿದ್ದ ಅನುರಾಧಾ ಧಾರೇಶ್ವರ, ಪರಿಸರ ಸಂರಕ್ಷೆಯಾಗಿದ್ದ ಸಾಲುಮರದ ತಿಮ್ಮಕ್ಕ, ಮಾಜಿ ಸಂಸದರು, ಖ್ಯಾತ ನಟ ಹಾಗೂ ನಿರ್ಮಾಪಕರಾಗಿದ್ದ ಧಮೇರ್ಂದ್ರ ಹಾಗೂ ಹಿರಿಯ ಹಾಸ್ಯ ನಟರಾಗಿದ್ದ ಮೈಸೂರು ಶ್ರೀಕಂಠಯ್ಯ ಉಮೇಶ್ ಅವರುಗಳು ನಿಧನಕ್ಕೆ ವಿμÁಧ ವ್ಯಕ್ತಪಡಿಸಿ ಸಂತಾಪ ಸೂಚಿಸಲಾಯಿತು.
ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ಸಭಾ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರು ಮೃತರ ಕುರಿತು ಮಾತನಾಡಿದರು. ಮೃತರ ಗೌರವಾರ್ಥ ಒಂದು ನಿಮಿಷ ಮೌನ ಆಚರಣೆ ಮಾಡಲಾಯಿತು.