ಸಮಾಜಮುಖಿ ಚಿಂತನೆ ಮತ್ತು ಮೌಲ್ಯಾಧಾರಿತ ಬದುಕಿನ ಮೂಲಕ ನಾಡಿನ ಗೌರವಕ್ಕೆ ಪಾತ್ರರಾಗಿರುವ ಡಾ. ಕೆ.ಜಿ. ಲಕ್ಷ್ಮೀನಾರಾಯಣಪ್ಪ ಅವರ 75ನೇ ವರ್ಷದ ಅಭಿನಂದನಾರ್ಥವಾಗಿ ರೂಪುಗೊಂಡಿರುವ ‘ನಿಸ್ಸ್ವಾರ್ಥ ಸಿರಿ’ ಅಭಿನಂದನಾ ಗ್ರಂಥದ ಲೋಕಾರ್ಪಣೆ ಸಮಾರಂಭವು ಜನವರಿ 13, 2026 (ಮಂಗಳವಾರ) ಸಂಜೆ 5.00ಕ್ಕೆ, ಬೆಂಗಳೂರಿನ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ, ನಾಡೋಜ ಡಾ. ಶಿವರಾಜ ವಿ. ಪಾಟೀಲ ಅವರು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಮಾಜಿ ಸಂಸದ ಹಾಗೂ ನೇಕಾರ ಸಮುದಾಯ ಒಕ್ಕೂಟದ ಗೌರವಾಧ್ಯಕ್ಷ ಕೆ.ಎಸ್. ಕೊಂಡಯ್ಯ ಉದ್ಘಾಟಿಸುವರು. ಹಿರಿಯ ಸಾಹಿತಿ ಮತ್ತು ಸಂಶೋಧಕ ಪ್ರೊ. ಹಂಪನಾ ಅವರು ಅಭಿನಂದನಾ ಗ್ರಂಥ **‘ನಿಸ್ಸ್ವಾರ್ಥ ಸಿರಿ’**ಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ
ನಾಡೋಜ ಡಾ. ವೂಡೇ ಪಿ. ಕೃಷ್ಣ (ಅಧ್ಯಕ್ಷ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ),
ರಾಮಲಿಂಗಾರೆಡ್ಡಿ (ಸಾರಿಗೆ ಮತ್ತು ಮುಜರಾಯಿ ಸಚಿವ),
ಹೆಚ್.ಎಂ. ರೇವಣ್ಣ (ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ),
ಕೆ.ಎಂ. ನಾಗರಾಜ್ (ಹಿರಿಯ ಮುತ್ಸದ್ದಿ) ಭಾಗವಹಿಸಲಿದ್ದಾರೆ.
ನಾಡೋಜ ಡಾ. ವೂಡೇ ಪಿ. ಕೃಷ್ಣ ಪ್ರಧಾನ ಸಂಪಾದಕರಾಗಿಯೂ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿ ಸಿದ್ಧಪಡಿಸಿರುವ ಈ ಗ್ರಂಥವನ್ನು ಅನ್ನಪೂರ್ಣ ಪಬ್ಲಿಷಿಂಗ್ ಹೌಸ್, ಬೆಂಗಳೂರು ಪ್ರಕಟಿಸಿದೆ.
ವಜ್ರಪೂರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಡಾ. ಲಕ್ಷ್ಮೀನಾರಾಯಣಪ್ಪ ಅವರ ಸೇವಾ ಬದುಕು, ಸಾಮಾಜಿಕ ಬದ್ಧತೆ ಮತ್ತು ಮಾನವೀಯ ಮೌಲ್ಯಗಳನ್ನು‘ನಿಸ್ಸ್ವಾರ್ಥ ಸಿರಿ’ ಗ್ರಂಥವು ದಾಖಲಿಸುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.