ಬೆಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಜನವರಿ 20 ರಂದು ಮೈಸೂರು ಜಿಲ್ಲೆಗ ಪ್ರವಾಸ ಕೈಗೊಂಡು ಮೈಸೂರಿನ ಕಿರು ರಂಗಮಂದಿರದಲ್ಲಿ ಧ್ವನಿ ಫೌಂಡೇಶನ್ ಹಾಗೂ ಎಂಎಂಕೆ ಮತ್ತು ಎಸ್.ಡಿ.ಎಂ ಮಹಿಳಾ ಮಹಾವಿದ್ಯಾಲಯ ಮೈಸೂರು ಇವರ ಸಹಯೋಗದಲ್ಲಿ ಆಯೋಜಿಸಿರುವ “ಕನ್ನಡ ಸಾಹಿತ್ಯ ಪುನರಾವಲೋಕನ - ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದೇ ಕೇಂದ್ರಸ್ಥಾನಕ್ಕೆ ಹಿಂದಿರುಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ.ಎಸ್.ಫಣಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment
0Comments