ಅಗಲಿದ ಪತ್ರಕರ್ತರುಗಳಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

varthajala
0

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂತಾಪ ಸಭೆಯಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಪತ್ರಕರ್ತರಾದ ನಾಗಶೆಟ್ಟಿ ಧರಂಪುರ, ದೊಡ್ಡಬೊಮ್ಮಯ್ಯ, ಭೀಮಸೇನ ಪದಕಿ ಎಂ.ಎನ್.ಪಾಟೀಲ,  ಸಕಲೇಶಪುರದ ಶಿವಕುಮಾರ್, ಕಲಬುರ್ಗಿ ಪ್ರಭುಲಿಂಗ ನೀಲೂರೆ, ಬಾವು ಪತ್ತಾರ, ರಾಯಚೂರು ನಹೀಮ್ ಅಶ್ರಫ್, ಮೈಸೂರಿನ ಸೂರಜ್ ಅವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.



ರಾಜ್ಯ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಖಜಾಂಚಿ ಎಂ.ವಾಸುದೇವಹೊಳ್ಳ, ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಅಗಲಿದ ಪತ್ರಕರ್ತರ ಕೆಲ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

Post a Comment

0Comments

Post a Comment (0)